ಟಿ.ಎಂ ವಿಜಯ ಭಾಸ್ಕರ್ 
ರಾಜ್ಯ

ಬಿಡಬ್ಲ್ಯೂ ಎಸ್ ಎಸ್ ಬಿ ಅಧ್ಯಕ್ಷ ಹುದ್ದೆಯಿಂದ ದಕ್ಷ ಅಧಿಕಾರಿ ವಿಜಯ ಭಾಸ್ಕರ್ ಎತ್ತಂಗಡಿ

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹುದ್ದೆಯಿಂದ ಐಎಎಸ್‌ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ...

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಹುದ್ದೆಯಿಂದ ಐಎಎಸ್‌ ಅಧಿಕಾರಿ ಟಿ.ಎಂ. ವಿಜಯ ಭಾಸ್ಕರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಜಯಭಾಸ್ಕರ್‌ ಅವರನ್ನು ಅರಣ್ಯ , ಪರಿಸರ  ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ಕಳೆದ ವಾರವಷ್ಟೇ ವರ್ಗಾವಣೆ ಮಾಡಲಾಗಿತ್ತು.  ನಂತರವೂ ಅವರನ್ನು ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾಗಿ ಮುಂದುವರಿಸಲಾಗಿತ್ತು.

ವಿಜಯಭಾಸ್ಕರ್ ಏಳು ತಿಂಗಳ ಹಿಂದೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.  ಬೆಳಿಗ್ಗೆ 6 ಗಂಟೆಯಿಂದಲೇ ಕಚೇರಿಗಳಿಗೆ ಹಠಾತ್‌ ಭೇಟಿ ನೀಡುವ ಮೂಲಕ ಅಧಿಕಾರಿಗಳಲ್ಲಿ ಚುರುಕು ಮುಟ್ಟಿಸಿದ್ದರು.ಅನಧಿಕೃತ ಸಂಪರ್ಕಗಳ ವಿರುದ್ಧ ಡಿಸೆಂಬರ್‌ನಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ನೀರಿನ ಶುಲ್ಕ ಬಾಕಿ ವಸೂಲಾತಿ ಆಂದೋಲನವನ್ನೂ ಶುರು ಮಾಡಿದ್ದರು. ಇದರಿಂದಾಗಿ ಮೂರು ತಿಂಗಳ ಅವಧಿಯಲ್ಲಿ ರು. 50 ಕೋಟಿಗೂ ಅಧಿಕ ಬಾಕಿ ವಸೂಲಿ ಆಗಿತ್ತು.

‘ಜಲಮಂಡಳಿ  ಅಧ್ಯಕ್ಷರಾಗಿದ್ದ ವಿಜಯಭಾಸ್ಕರ್‌ ಹಾಗೂ ಬಿಬಿ ಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತರಾಗಿದ್ದ ಮಥಾಯಿ  ಅವರ ವರ್ಗಾವಣೆಯಲ್ಲಿ ನನ್ನ ಪಾತ್ರ ಇಲ್ಲ. ವಿಜಯಭಾಸ್ಕರ್‌ ಅವರು ಉತ್ತಮ ಅಧಿಕಾರಿ. ಅವರ ವರ್ಗಾವಣೆ ಆಡಳಿತಾತ್ಮಕ ನಿರ್ಧಾರ ಎಂದು ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಅವರಿಗೆ ಜಲಮಂಡಳಿ ಅಧ್ಯಕ್ಷರ ಹೊಣೆ ವಹಿಸಲಾಗಿದೆ. ಮಹೇಂದ್ರ ಜೈನ್‌ ಅವರು ಶನಿವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮಂಡಳಿಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT