ಯದುವೀರ್ ಒಡೆಯರ್ - ರಾಜಕುಮಾರಿ ತ್ರಿಷಿಕಾ 
ರಾಜ್ಯ

ಸರಳ ವಿವಾಹಕ್ಕೆ ಯದುವೀರ್ ಒಡೆಯರ ಒಲವು: ನಿರ್ಧಾರ ರಾಜಮಾತೆಗೆ ಬಿಟ್ಟದ್ದು

ಸರಳ ವಿವಾಹವಾಗುವುದು ನನಗಿಷ್ಟ, ಅದಕ್ಕೆ ನಾನು ಆದ್ಯತೆ ನೀಡುತ್ತೇನೆ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ...

ಮೈಸೂರು: ಸರಳ ವಿವಾಹವಾಗುವುದು ನನಗಿಷ್ಟ, ಅದಕ್ಕೆ ನಾನು ಆದ್ಯತೆ ನೀಡುತ್ತೇನೆ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ರಾಜ್ಯದ ಜನತೆ ಹಲವು ದಿನಗಳಿಂದ ಕುತೂಹಲದಿಂದ ನಿರೀಕ್ಷಿಸುತ್ತಿರುವ ಮೈಸೂರು ರಾಜ ಮನೆತನದ ಅರಸ ಯದುವೀರ್ ಚಾಮರಾಜ ಒಡೆಯರ್ ಅವರ ವಿವಾಹ ಮಹೋತ್ಸವ ಜೂನ್ 27 ಮತ್ತು 28 ಕ್ಕೆ ನಿಗದಿಯಾಗಿದೆ. 
ತಮ್ಮ ವಿವಾಹ ಸಮಾರಂಭದ ಕುರಿತು ಮಾತನಾಡಿರುವ ಯದುವೀರ ಒಡೆಯರ್ ಅವರು, ಸರಳ ವಿವಾಹಕ್ಕೆ ನಾನು ಆದ್ಯತೆ ನೀಡುತ್ತೇನೆ. ಆದರೆ ವಿವಾಹ ಹೇಗೆ ನಡೆಯಬೇಕು ಎಂಬುದನ್ನು ತಾಯಿ ಪ್ರಮೋದಾದೇವಿ ಒಡೆಯರ್ ಮತ್ತು ಧರ್ಮಾಧಿಕಾರಿಗಳು ನಿರ್ಧರಿಸುತ್ತಾರೆ ಎಂದ ಅವರು, ಆರತಕ್ಷತೆ ಮತ್ತು ವಿವಾಹ ಮೈಸೂರಿನಲ್ಲೇ ನಡೆಯಲಿದೆ ಎಂದು ತಿಳಿಸಿದ್ದಾರೆ. 
ಇನ್ನು ರಾಜಸ್ತಾನದ ದುಂಗಾರ್ಪುರ ರಾಜಮನೆತನದ ರಾಜಕುಮಾರಿ ತ್ರಿಷಿಕಾ ಮತ್ತು ಯದುವೀರ್ ವಿವಾಹಕ್ಕೆ ಮೈಸೂರಿನ ಅಂಬಾ ವಿಲಾಸ ಅರಮನೆ ಸಕಲ ರೀತಿಯಲ್ಲೂ ಸಿದ್ಧಗೊಳ್ಳುತ್ತಿದೆ.
ಸಂಪ್ರದಾಯಬದ್ಧ ವಿವಾಹಕ್ಕೆ ಮೈಸೂರು ಅರಮನೆ ಸಾಕ್ಷಿಯಾಗಲಿದೆ. ಈ ಅದ್ಧೂರಿ ವಿವಾಹಕ್ಕೆ ರಾಜ ಮನೆತನದ ಸದಸ್ಯರು ಮತ್ತು ಗಣ್ಯರು ಹಾಗೂ ಅತೀ ಗಣ್ಯರು ಪಾಲ್ಗೋಳ್ಳಲಿದ್ದಾರೆ.
ಇನ್ನೂ ಅರಮನೆಯ ಒಳಭಾಗದಲ್ಲಿರುವ ಗಣೇಶ ದೇವಾಲಯದಲ್ಲಿ ಚಾಮುಂಡೇಶ್ವರಿ ದೇವಿಯ ಪೂಜಾ ಕೈಂಕರ್ಯ ನಡೆಸಲಾಗುತ್ತದೆ. ಅರಮನೆ ಪೂಜಾರಿಗಳೇ ವಿವಾಹದ ಎಲ್ಲಾ ವಿಧಿವಿಧಾನಗಳನ್ನ ನೇರವೇರಿಸಲಿದ್ದಾರೆ. ತ್ರಿಷಿಕಾ ಪೋಷಕರು ಕೂಡ ಈ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.  40 ವರ್ಷಗಳ ನಂತರ ಅರಮನೆಯಲ್ಲಿ ನಡೆಯುತ್ತಿರುವ ವಿವಾಹ ಇದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT