ಹತ್ಯೆ 
ರಾಜ್ಯ

ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ ಪ್ರಿಯತಮೆ ಹತ್ಯೆ

ಪ್ರೀತಿ ಹೆಸರಲ್ಲಿ 19ರ ಹರೆಯದ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ...

ಗೌರಿಬಿದನೂರು: ಪ್ರೀತಿ ಹೆಸರಲ್ಲಿ 19ರ ಹರೆಯದ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ  ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭಪಾತ ಮಾತ್ರೆ ಬದಲಿಗೆ ವಿಷದ ಮಾತ್ರೆ ನೀಡಿ ಕೊಲೆ ಮಾಡಿರುವ ಘಟನೆ ನಡೆದಿದೆ.

ನರೇಶ್ ಎಂಬಾತ ಪ್ರಿಯತಮೆ 19 ವರ್ಷದ ಗೀತಾಳನ್ನು ಕಳೆದ ಆರು ತಿಂಗಳಿನಿಂದ ಪ್ರೀತಿಸುತ್ತಿದ್ದ, ಜತೆಗೆ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳಸಿದ್ದು ಆಕೆ ಗರ್ಭದರಿಸಿದ್ದಾಳೆ. ಇದರಿಂದ ಗಾಬರಿಗೊಂಡ ನರೇಶ್ ಆಕೆಗೆ ಗರ್ಭಪಾತ ಮಾತ್ರೆಗೆ ಬದಲಿಗೆ ವಿಷದ ಮಾತ್ರೆ ನೀಡಿದ್ದಾನೆ. ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಗೀತಾಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ಗೀತಾಳ ಸಾವಿಗೆ ನರೇಶ್ ಕಾರಣ ಎಂದು ಪೋಷಕರು ಆರೋಪಿಸಿ ಆತನ ಮನೆ ಎದುರು ಶವವಿಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗೌರಿ ಬಿದನೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT