ಕೆ. ಮರಿಗೌಡ 
ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಕಡೆಗೂ ಪೊಲೀಸರಿಗೆ ಶರಣಾದ ಸಿಎಂ ಆಪ್ತ ಮರಿಗೌಡ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ...

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿ, ತಲೆಮರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಮರಿಗೌಡ ಅವರು ಕಡೆಗೂ ಬುಧವಾರ ಪೊಲೀಸರಿಗೆ ಶರಣಾಗಿದ್ದಾರೆ.
ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನಿನ್ನೆ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದ ಮರಿಗೌಡ ಇಂದು, ವಕೀಲರ ಜೊತೆ ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಗೆ ಹಾಜರಾಗಿ, ಪೊಲೀಸರಿಗೆ ಶರಣಾಗಿದ್ದಾರೆ.
ಮರಿಗೌಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಬಂಧನ ಭೀತಿಯಲ್ಲಿದ್ದ ಸಿಎಂ ಆಪ್ತ ಕೇರಳದ ಕೊಟ್ಟಂನ ಖಾಸಗಿ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಎನ್ನಲಾಗಿದೆ.
ಮರಿಗೌಡ ಅವರು ಅಧಿಕಾರಿಯ ವರ್ಗಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಶಿಖಾ ಅವರು ಕಾಂಗ್ರೆಸ್ ನಾಯಕ ಸಿಎಂ ಆಪ್ತ ಮರಿಗೌಡ ವಿರುದ್ಧ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಮರಿಗೌಡ ತಲೆಮರೆಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

Andaman Express: 110 ರೂ ದರ ಊಟಕ್ಕೆ 140 ರೂ.. : ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viral

'ಕಾಲಿಗೆ ಪೆಟ್ಟಾಗಿದೆ.. ಪ್ಲೀಸ್ ಚಿಕಿತ್ಸೆ ಕೊಡಿ': ಆಸ್ಪತ್ರೆಗೆ ಬಂದು ಚಿಕಿತ್ಸೆ ಕೇಳಿ ಪಡೆದ ಬೀದಿ ನಾಯಿ, Video Viral

ಅಂಬಾ ದೇವಿಯ ದರ್ಶನ ಆಗಿದ್ದು ನನ್ನ ಪುಣ್ಯ: ಸಿಎಂ ಸಿದ್ದರಾಮಯ್ಯ

SCROLL FOR NEXT