ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸುತ್ತಿರುವ ಪೊಲೀಸರು 
ರಾಜ್ಯ

ಮೈಸೂರು ಕೋರ್ಟ್ ಸ್ಫೋಟ: ಸ್ಥಳಕ್ಕೆ ಎನ್ಐಎ ಮತ್ತು ಕೇರಳ ಪೊಲೀಸ್ ತಂಡ ಆಗಮನ

ಜಿಲ್ಲಾ ನ್ಯಾಯಾಲಯ ಆವರಣದ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಕೇರಳ ...

ಮೈಸೂರು: ಜಿಲ್ಲಾ ನ್ಯಾಯಾಲಯ ಆವರಣದ ಸಾರ್ವಜನಿಕ ಶೌಚಾಲಯದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ಕೇರಳ ಪೊಲೀಸರ ತಂಡ ಮಂಗಳವಾರ ಬಂದು ಪರಿಶೀಲನೆ ನಡೆಸಿದ್ದಾರೆ.

ಆರು ತಿಂಗಳಿನಿಂದ ಈಚೆಗೆ ರಾಷ್ಟ್ರದ ವಿವಿಧೆಡೆ ನ್ಯಾಯಾಲಯದ ಆವರಣಗಳಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟ ಪ್ರಕರಣಗಳಿಗೂ ಇದಕ್ಕೂ ಇರುವ ಸಾಮ್ಯತೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಜೂನ್ 15 ರಂದು ಕೇರಳದ ಕೊಲ್ಲಂ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿತ್ತು.  ಈ ಹಿನ್ನೆಲೆಯಲ್ಲಿ  ಆಗಮಿಸಿರುವ ಕೇರಳ ವಿಶೇಷ ತಂಡ ತನಿಖೆ ನಡೆಸುತ್ತಿದೆ.

ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳವು ಆಗಮಿಸಿ ಸ್ಫೋಟ ನಡೆದ ಸ್ಥಳ ಹಾಗೂ ನ್ಯಾಯಾಲಯದ ಆವರಣವನ್ನು ಪರಿಶೀಲನೆ ನಡೆಸಿತು.  ಆಂತರಿಕ ಭದ್ರತಾ ವಿಭಾಗದ ಡಿಜಿಪಿ ನೀಲಮಣಿ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನ್ಯಾಯಾಲಯದ ಪಕ್ಕದ ಬಯಲು ಪ್ರದೇಶದಲ್ಲಿ ಕೆಲವು ವೈರ್‌ಗಳು, ಕಬ್ಬಿಣದ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಫೋಟದ ನಂತರ ನಗರದ ಹಲವು ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರೈಲು ನಿಲ್ದಾಣ, ಅರಮನೆ, ಮೃಗಾಲಯ ಸೇರಿ ದಂತೆ ಹಲವೆಡೆ ಕಟ್ಟೆಚ್ಚರವಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?