ದಸರಾ ಜಂಬೂ ಸವಾರಿ 
ರಾಜ್ಯ

ಅಕ್ಟೋಬರ್ 1ಕ್ಕೆ ಮೈಸೂರು ದಸರಾ ಉದ್ಘಾಟನೆ; 11ಕ್ಕೆ ಜಂಬೂ ಸವಾರಿ; ಉದ್ಘಾಟನೆಗೆ ಸಚಿನ್?

016ರ ವಿಶ್ವ ವಿಖ್ಯಾತ ದಸರಾ ಉತ್ಸವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ದಲ್ಲಿ ಸಭೆ ನಡೆಯಿತು. ..

ಬೆಂಗಳೂರು: 2016ರ ವಿಶ್ವ ವಿಖ್ಯಾತ ದಸರಾ ಉತ್ಸವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧ ದಲ್ಲಿ ಸಭೆ ನಡೆಯಿತು.

ಸಭೆ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 1 ರಂದು ಬೆಳಗ್ಗೆ 11.40ಕ್ಕೆ ದಸರಾ ಉದ್ಘಾಟನೆ ಯಾಗಲಿದೆ. ಪ್ರತಿ ಭಾರಿಯಂತೆ ಈ ಬಾರಿ ಗಣ್ಯರಿಂದ ದಸರಾ ಉದ್ಘಾಟನೆ ನಡೆಯಲಿದೆ.

ಸಚಿನ್ ತೆಂಡೂಲ್ಕರ್, ಚನ್ನವೀರ ಕಣವಿ, ಎಸ್,ಎಲ್ ಭೈರಪ್ಪ, ನಿಸಾರ್ ಅಹಮದ್ ಹೆಸರು ಕೇಳಿ ಬಂದಿದ್ದು ಆಗಸ್ಟ್ 9 ರಂದು ನಡೆಯುವ ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಭಾರಿ ಸರಳವೂ ಅಲ್ಲದ, ಅದ್ಧೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ನಡೆಸಲಾಗುವುದು. ಅಕ್ಟೋಬರ್ 11 ರಂದು ವಿಜಯ ದಶಮಿ ನಡೆಯಲಿದ್ದು, ಅಂದೇ ಜಂಬೂಸವಾರಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.

ಕಳೆದ ಬಾರಿ ಭೀಕರ ಬರಗಾಲ ಇದ್ದ ಕಾರಣ ಸರಳವಾಗಿ ದಸರ ಆಚರಿಸಲಾಯಿತು. ಈ ಬಾರಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ  ಹಲವೆಡೆ ಉತ್ತಮ ಮಳೆಯಾಗಿದೆ. ಆದರೂ ಅದ್ದೂರಿಯಲ್ಲದ ಸರಳವೂ ಅಲ್ಲದ ದಸರಾ ಆಚರಿಸಲಾಗುವುದು ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT