ಸಾಂದರ್ಭಿಕ ಚಿತ್ರ 
ರಾಜ್ಯ

ಮುಖ್ಯಮಂತ್ರಿಗಳ ಪರಿಹಾರ ನಿಧಿ ಹಣ ದುರ್ಬಳಕೆ: ನಾಲ್ವರ ಬಂಧನ

ಮುಖ್ಯಮಂತ್ರಿ ಪರಿಹಾರ ನಿಧಿಯ ವೈದ್ಯಕೀಯ ನೆರವು ದುರ್ಬಳಕೆ ಪ್ರಕರಣದ ಸಂಬಂಧ ಸಿಐಡಿ ಪೊಲೀಸರು ನಾಲ್ವರನ್ನು...

ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಯ ವೈದ್ಯಕೀಯ ನೆರವು ದುರ್ಬಳಕೆ ಪ್ರಕರಣದ ಸಂಬಂಧ ಸಿಐಡಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಮೋಘಪ್ಪ, ತುಮಕೂರಿನ ಎಂ.ಕೆ.ಕಿರಣ್‌ ಹಾಗೂ ಮಂಡ್ಯದ ಸಿ.ಎಂ.ನಾಗರಾಜ್‌ ಶೆಟ್ಟಿ ಮತ್ತು ಶಂಕರ್ ಬಂಧಿತರು. ಆರೋಪಿಗಳಿಂದ ಹಲವು ನಕಲಿ ವೈದ್ಯಕೀಯ ದಾಖಲೆಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಶಿಫಾರಸು ಪತ್ರ ಜಪ್ತಿ ಮಾಡಲಾಗಿದೆ.

ಆರೋಪಿಗಳು ವಿವಿಧ ಆಸ್ಪತ್ರೆಗಳ ಬಿಲ್ ಹಾಗೂ ಡಿಸ್ಚಾರ್ಜ್ ಮಾಡಿರುವ ರಸೀದಿ ಪಡೆದು ಅದನ್ನು ತಂದು ಸರ್ಕಾರಕ್ಕೆ ನೀಡಿ ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದರು.

ಕಲಬುರಗಿ ಜಿಲ್ಲೆಯ ತನ್ನೂರಿನ ಜನರು ಸೇರಿದಂತೆ ನೆರೆಹೊರೆ ಗ್ರಾಮಸ್ಥರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವೈದ್ಯಕೀಯ ನೆರವು ಕೊಡಿಸುವುದಾಗಿ ನಂಬಿಸಿ ಅಮೋಘಪ್ಪ ವಂಚಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.  ಕಲುಬರಗಿಯ ಚಿರಾಯು, ವಾತ್ಸಲ್ಯ, ಮಹಾರಾಷ್ಟ್ರದ ಸೊಲ್ಲಾಪುರದ ಯಶೋಧರಾ, ಅಶ್ವಿ‌ನಿ ಆಸ್ಪತ್ರೆಗಳ ಹೆಸರಿನಲ್ಲಿ ನಕಲಿ ವೈದ್ಯಕೀಯ ಹಾಗೂ ಬಿಡುಗಡೆ ಪತ್ರಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ್ದರು ಎಂದು ಸಿಐಡಿ ಅಧಿಕಾರಿಗಳು ವಿವರಿಸಿದ್ದಾರೆ. ಬಂದ ಹಣದಲ್ಲಿ ಆಸ್ಪತ್ರೆಗೆ ಇಂತಿಷ್ಟು ಕಮಿಷನ್ ಹಣವನ್ನು ಅಮೋಘಪ್ಪ ನೀಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT