ಅಕ್ರಮ ಭೂ ಒತ್ತುವರಿ ಕಾರ್ಯಾಚರಣೆ (ಟಿಎನ್ ಐಇ ಚಿತ್ರ) 
ರಾಜ್ಯ

ಅಕ್ರಮ ಒತ್ತುವರಿ: ಭಾನುವಾರವೂ ಮುಂದುವರೆದ ಕಾರ್ಯಾಚರಣೆ

ಬಿಬಿಎಂಪಿ ಅಧಿಕಾರಿಗಳುನ ಶನಿವಾರದಿಂದ ನಡೆಸುತ್ತಿರುವ ಅಕ್ರಮ ಭೂ ಮತ್ತು ರಾಜಾ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾನುವಾರವೂ ಮುಂದುವರೆದಿದ್ದು, ಮಹದೇವಪುರ, ಕೈಗೊಂಡನಹಳ್ಳಿ ಮತ್ತು ಕಸವನಹಳ್ಳಿಯಲ್ಲಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ.

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳುನ ಶನಿವಾರದಿಂದ ನಡೆಸುತ್ತಿರುವ ಅಕ್ರಮ ಭೂ ಮತ್ತು ರಾಜಾ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾನುವಾರವೂ ಮುಂದುವರೆದಿದ್ದು,  ಮಹದೇವಪುರ, ಕೈಗೊಂಡನಹಳ್ಳಿ ಮತ್ತು ಕಸವನಹಳ್ಳಿಯಲ್ಲಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ.

ಶನಿವಾರ ಆರಂಭಗೊಂಡಿದ್ದ ಒತ್ತುವರಿ ಕಾರ್ಯಾಚರಣೆಯನ್ನು ಭಾನುವಾರವೂ ಮುಂದುವರೆಸಿದ ಬಿಬಿಎಂಪಿ ಅಧಿಕಾರಿಗಳು ಮಹದೇವಪುರ ವ್ಯಾಪ್ತಿಯಲ್ಲಿ, ಕೈಗೊಂಡನಹಳ್ಳಿ ಮತ್ತು  ಕಸವನಹಳ್ಳಿಯಿಂದ ಚೋಳಕೆರೆವರೆಗೂ ತೆರವು ಕಾರ್ಯಾಚರಣೆ ನಡೆಸಿದರು. ಈ ವೇಳೆ ರಾಜಾಕಾಲುವೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ 2 ಅಪಾರ್ಟ್ ಮೆಂಟ್ ಹಾಗೂ ನಾಲ್ಕು ಮನೆಗಳನ್ನು  ನೆಲಸಮಗೊಳಿಸಿದರು.

ಬೊಮ್ಮನಹಳ್ಳಿ ವಲಯದ ಅವಾನಿ ಶೃಂಗೇರಿ, ಅರಕೆರೆಗಳಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ದಿಢೀರ್ ಕಾರ್ಯಾಚರಣೆ ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮನೆ  ಕಳೆದುಕೊಂಡ ನಿವಾಸಿಗಳು ಹಿಡಿ ಶಾಪಹಾಕಿದರು. ಇತ್ತೀಚೆಗಷ್ಟೇ ನಿರ್ಮಾಣವಾದ ಮತ್ತು ಇನ್ನೂ ಗೃಹ ಪ್ರವೇಶ ಕೂಡ ಆಗದ ಐಶಾರಾಮಿ ಮನೆ ಕೂಡ ಒತ್ತುವರಿ ಕಾರ್ಯಾಚರಣೆಯಿಂದಾಗಿ  ನೆಲಸಮವಾಗಿದ್ದು, ಮನೆಯ ಮಾಲೀಕರು ಸುಮಾರು 2.3 ಕೋಟಿ ಖರ್ಚು ಮಾಡಿ ಮನೆ ನಿರ್ಮಿಸಿದ್ದರು ಎಂದು ಹೇಳಲಾಗುತ್ತಿದೆ.

ಮನೆಯನ್ನು ಜೆಸಿಬಿ ಮೂಲಕ ಕೆಡವುತ್ತಿದ್ದಂತೆಯೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮನೆ ಮಾಲೀಕರು ಅವರೊಂದಿಗೆ ವಾಕ್ಸಮರ ನಡೆಸಿದರು. ಈ ವೇಳೆ ಪೊಲೀಸರು ಮಧ್ಯ  ಪ್ರವೇಶಿಸಿದರೂ ಸುಮ್ಮನಾಗದ ಮನೆ ಮಾಲೀಕರು, ಅಧಿಕಾರಿಗಳಿಗೆ ಶಾಪಹಾಕುತ್ತಲೇ ಕಣ್ಣೀರಿಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT