ಚಿಕ್ಕೋಡಿ ಗ್ರಾಮದಲ್ಲಿ ಪ್ರಹಾವ (ಸಂಗ್ರಹ ಚಿತ್ರ) 
ರಾಜ್ಯ

"ಮಹಾ" ಮಳೆ: ಕರ್ನಾಟಕದ ಚಿಕ್ಕೋಡಿಯಲ್ಲಿ ಪ್ರವಾಹ, ಮನೆ ತೊರೆದ ಗ್ರಾಮಸ್ಥರು

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಭಾನುವಾರವೂ ಮುಂದುವರೆದಿದ್ದು, ಕರ್ನಾಟಕದ ಗಡಿ ಭಾಗದ ಜಿಲ್ಲೆಗಳಲ್ಲೂ ಮಳೆ ವ್ಯಾಪಕ ದುಷ್ಪರಿಣಾಮ ಬೀರಿದೆ.

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಭಾನುವಾರವೂ ಮುಂದುವರೆದಿದ್ದು, ಕರ್ನಾಟಕದ ಗಡಿ ಭಾಗದ ಜಿಲ್ಲೆಗಳಲ್ಲೂ ಮಳೆ  ವ್ಯಾಪಕ ದುಷ್ಪರಿಣಾಮ ಬೀರಿದೆ.

ಪ್ರಮುಖವಾಗಿ ಮಹಾರಾಷ್ಟ್ರದ ಭಾರಿ ಮಳೆಯಿಂದಾಗಿ ಅಲ್ಲಿನ ಬಹುತೇಕ ಜಲಾಶಯಗಳು ಅಪಾಯದ ಮಟ್ಟ ಮೀರಿದ್ದು, ಇದೇ ಕಾರಣಕ್ಕಾಗಿ ಕೃಷ್ಣಾ, ಗೋದಾವರಿ ಮತ್ತು ದೂದ್ ಗಂಗಾ ನದಿಗಳಿಗೆ  ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಕರ್ನಾಟಕದ ಗಡಿ ಭಾಗದಲ್ಲಿರುವ ಜಿಲ್ಲೆಗಳ ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದ್ದು, ಬಹುತೇಕ ಗ್ರಾಮಸ್ಥರು ಇದೀಗ ಗ್ರಾಮ  ತೊರೆಯುವಂತಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿರುವ ಯಕ್ಸಂಬಾ ಪಟ್ಟಣದಲ್ಲಿ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿದ್ದು, ನದಿ ತಟದಲ್ಲಿರುವ ತೋಟ ಮತ್ತು ಗದ್ದೆಗಳು ಸಂಪೂರ್ಣ ಜಲಾವೃತ್ತಗೊಂಡಿವೆ. ಈ  ಪಟ್ಟಣದ ಸುಮಾರು 15ಕ್ಕೂ ಹೆಚ್ಚು ರೈತ ಕುಟುಂಬಗಳು ಗ್ರಾಮ ತೊರೆದಿದ್ದು, ಸುರಕ್ಷಿತ ಪ್ರದೇಶಗಳನ್ನರಸಿ ಹೊರಟಿವೆ. ಇನ್ನು ಮುಂದಿನ 48 ಗಂಟೆಗಳಲ್ಲಿ ಈ ಭಾಗದಲ್ಲಿ ಮತ್ತಷ್ಟು  ಮಳೆಯಾಗಲಿದೆ ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇನ್ನು ಕಳೆದ ಕೇವಲ 24 ಗಂಟೆಗಳ ಅವಧಿಯಲ್ಲಿ ಮುಂಬೈ ನಗರವೊಂದರಲ್ಲೇ ಬರೊಬ್ಬರಿ 142 ಮಿಲಿ ಮೀಟರ್ ಮಳೆಯಾಗಿದ್ದು, ಇದು ಈ ವರೆಗಿನ ಮುಂಬೈನಲ್ಲಿನ ಅತ್ಯಧಿಕ ಮಳೆಯಾಗಿದೆ  ಎಂದು ಹೇಳಲಾಗುತ್ತಿದೆ.

ಒಟ್ಟಾರೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕೇವಲ ಆ ರಾಜ್ಯಕ್ಕೆ ಮಾತ್ರವಲ್ಲದೆ ಕರ್ನಾಟಕದ ಗಡಿ ಜಿಲ್ಲೆಗಳಲ್ಲೂ ಪರಿಣಾಮ ಬೀರಿ, ಜನಜೀವನ ಅಸ್ತವ್ಯಸ್ಥಗೊಳ್ಳುವಂತೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT