ದರ್ಶನ್ 
ರಾಜ್ಯ

ನಟ ದರ್ಶನ್, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪಗೂ ರಾಜಕಾಲುವೆ ಒತ್ತುವರಿ ತೆರವು ಬಿಸಿ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೂ ರಾಜಕಾಲುವೆ ಒತ್ತುವರಿ ತೆರವಿನ ಬಿಸಿ...

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೂ ರಾಜಕಾಲುವೆ ಒತ್ತುವರಿ ತೆರವಿನ ಬಿಸಿ ಮುಟ್ಟುವ ಸಾಧ್ಯತೆ ಇದೆ.
ರಾಜರಾಜೇಶ್ವರಿನಗರದಲ್ಲಿ ಐಡಿಯಲ್ ಹೋಮ್ ಟೌನ್ ಶಿಪ್ ರಾಜಕಾಲುವೆ ಒತ್ತುವರಿ ಮಾಡಿ ಅಕ್ರಮವಾಗಿ ಲೇಔಟ್ ನಿರ್ಮಿಸಿದ್ದು, ಅದರಲ್ಲಿ ನಿವೇಶನ ಖರೀದಿಸಿದ್ದ ನಟ ದರ್ಶನ್ ಈಗ ಅಲ್ಲಿ ಮನೆಯನ್ನೂ ನಿರ್ಮಿಸಿದ್ದಾರೆ.  ಹೀಗಾಗಿ ರಾಜರಾಜೇಶ್ವರಿನಗರದಲ್ಲಿರುವ ದರ್ಶನ್ ಅವರ ಮನೆಯನ್ನು ಸಹ ಬಿಬಿಬಿಎಂಪಿ ತೆರವು ಮಾಡುವ ಸಾಧ್ಯದೆ ಇದೆ ಎನ್ನಲಾಗುತ್ತಿದೆ.
ಇನ್ನು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಎಸ್ ಎಸ್ ಆಸ್ಪತ್ರೆಯೂ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಈ ಬಗ್ಗೆ ಪ್ರತಿಕ್ರಿಯಿಸರುವ ಬಿಬಿಎಂಪಿ ಜಂಟಿ ಆಯುಕ್ತ ಡಾ.ವೀರಭದ್ರಪ್ಪ ಅವರು, ಬಿಬಿಎಂಪಿ, ಕಂದಾಯ ಹಾಗೂ ಸರ್ವೇ ಅಧಿಕಾರಿಗಳು ದರ್ಶನ್ ಅವರ ಮನೆ ಇರುವ ಪ್ರದೇಶದಲ್ಲಿ ಸರ್ವೇ ನಡೆಸಲಿದ್ದಾರೆ. ಒಂದು ವೇಳೆ ದರ್ಶನ್ ಅವರ ಮನೆ ಒತ್ತುವರಿ ಜಾಗದಲ್ಲಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ನೂರಾರು ಮಂದಿ ಈಗಾಗಲೇ ಮನೆ, ಮಠ ಕಳೆದುಕೊಂಡಿದ್ದಾರೆ. ಇದೀಗ ನಟರು, ರಾಜಕಾರಣಿಗಳು, ಮಾಜಿ ಸಚಿವರಿಗೂ ಒತ್ತುವರಿ ತೆರವು ಬಿಸಿ ಮುಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT