ನಗರಕ್ಕೆ ಕಾಲಿಡಲಿದೆ 637 ಹೊಸ ಕೆಎಸ್ಆರ್'ಟಿಸಿ ಬಸ್ 
ರಾಜ್ಯ

ನಗರಕ್ಕೆ ಕಾಲಿಡಲಿದೆ 637 ಕೆಎಸ್ಆರ್'ಟಿಸಿ ಹೊಸ ಬಸ್'ಗಳು

ನಗರಕ್ಕೆ ಹೊಸದಾದ 637 ಹೊಸ ಕೆಎಸ್ಆರ್ ಟಿಸಿ ಬಸ್ ಗಳು ಪಾದಾರ್ಪಣೆ ಮಾಡಲಿದ್ದು, ಹೊಸ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಲಿದ್ದಾರೆ...

ಬೆಂಗಳೂರು: ನಗರಕ್ಕೆ ಹೊಸದಾದ 637 ಹೊಸ ಕೆಎಸ್ಆರ್ ಟಿಸಿ ಬಸ್ ಗಳು ಪಾದಾರ್ಪಣೆ ಮಾಡಲಿದ್ದು, ಹೊಸ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಲಿದ್ದಾರೆ.

ರಾಜ್ಯದ ಮಧ್ಯಮ ಹಾಗೂ ಸಣ್ಣ ಪ್ರದೇಶಗಳಿಗೆ ಉನ್ನತ ಮಟ್ಟದಲ್ಲಿ ಸಂಪರ್ಕ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ)ಯು ಹೊಸದಾಗಿ 637 ಹೊಸ ಬಸ್ ಗಳನ್ನು ಬಿಟ್ಟಿದ್ದು, ಹೊಸ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ವಿಧಾನಸೌಧದ ಬಳಿ ಚಾಲನೆ ನೀಡಲಿದ್ದಾರೆ.

ಚಾಲನೆಗೊಳ್ಳಲಿರುವ ಹೊಸಬಸ್ ಗಳು ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ರಾಮನಗರ, ತುಮಕೂರು, ಕೋಲಾರ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ. ಹೊಸ್ ಬಸ್ ಗಳಲ್ಲಿ ಸಿಸಿಟಿವಿ, ಪ್ಯಾನಿಕ್ ಬಟನ್, ಎಲ್ ಇಡಿ ಡಿಸ್ಪ್ಲೇ ಜೊತೆಗೆ ವಾಯ್ಸ್ ಅನೌನ್ಸ್ ಮೆಂಟ್ ಸಿಸ್ಟಮ್ ಸೇರಿದಂತೆ  ಅಗತ್ಯ ತಂತ್ರಜ್ಞಾನ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊಸ ಕೆಎಸ್ಆರ್ ಟಿಸಿ ಬಸ್ ಬಸ್ ಗಳ ಚಾಲನಾ ಸಮಾರಂಭದಲ್ಲಿ, ಕೇಂದ್ರ ಸಚಿವ ವೆಂಕಯ್ಯನಾಯ್ಡು, ಡಿ.ವಿ. ಸದಾನಂದಗೌಡ ಮತ್ತು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹಾಜರಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!