ಎಬಿವಿಪಿ ಪ್ರತಿಭಟನೆ (ಸಂಗ್ರಹ ಚಿತ್ರ) 
ರಾಜ್ಯ

ಸೇನೆ ವಿರೋಧಿ ಘೋಷಣೆ; ಅಮ್ನೆಸ್ಟಿ ಕಚೇರಿಗೆ ಎಬಿವಿಪಿ ಮುತ್ತಿಗೆ, ಪೊಲೀಸರಿಂದ ಲಾಠಿ ಪ್ರಹಾರ

ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಸ್ಥೆಯ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನಡೆದ ಲಾಠಿ ಚಾರ್ಜ್ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಬೆಂಗಳೂರು: ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಬೆಂಗಳೂರಿನ  ಇಂದಿರಾನಗರದಲ್ಲಿರುವ ಸಂಸ್ಥೆಯ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನಡೆದ ಲಾಠಿ ಚಾರ್ಜ್ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ವಿದ್ಯಾರ್ಥಿಗಳು ನಡೆಸುತ್ತಿರುವ  ಪ್ರತಿಭಟನೆ ಇಂದು ಹಿಂಸಾಚಾರಕ್ಕೆ ತಿರುಗಿದ್ದು, ಇಂದಿರಾನಗರದಲ್ಲಿರುವ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯ ಕಚೇರಿ ಬಳಿ ಸೇರಿದ್ದ ನೂರಾರು ಎಬಿವಿಪಿ ಕಾರ್ಯಕರ್ತರು  ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಘಟನೆ ಹಿಂಸಾಚಾರಕ್ಕೆ  ತಿರುಗಿದೆ.

ಈ ವೇಳೆ ಪ್ರತಿಭಟನಾನಿರತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದಾಗ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳ ತಲೆಗೆ ಏಟು ಬಿದ್ದು ರಕ್ತ ಹರಿದಿದ್ದು,  ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಪೊಲೀಸ್ ಲಾಠಿ ಪ್ರಹಾರವನ್ನು ಖಂಡಿಸಿರುವ ಕಾರ್ಯಕರ್ತರು ಪೊಲೀಸರು ಹಾಗೂ ರಾಜ್ಯ ಸರ್ಕಾರದ  ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ ದೇಶದ್ರೋಹ ಆರೋಪ ಎದುರಿಸುತ್ತಿರುವ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಮತ್ತಾವುದೇ ಕಾರ್ಯಕ್ರಮಗಳನ್ನು ನಿರ್ವಹಿಸದಂತೆ ಅದನ್ನೂ ಕೂಡಲೇ  ಸ್ಥಗಿತಗೊಳಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT