ಹೆತ್ತವರ ಹೆಣದ ಮುಂದೆ ಕುಳಿತ ಮುಗ್ದ ಕಂದ 
ರಾಜ್ಯ

ಅಯ್ಯೋ ವಿಧಿಯೇ... ಕೊಪ್ಪಳದಲ್ಲಿ ಹೆತ್ತವರ ಹೆಣದ ಮುಂದೆ ಕುಳಿತ ಮುಗ್ದ ಕಂದ

ಕೊಪ್ಪಳ ಜಿಲ್ಲೆಯ ಮುನಿರಾಬಾದ್ ರೈಲ್ವೆ ನಿಲ್ದಾಣದಲ್ಲಿ ದಂಪತಿಗಳಿಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಪಕ್ಕದಲ್ಲೇ ಏನೂ ಅರಿಯದ ಎರಡು ವರ್ಷದ ಪುಟ್ಟ...

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ರೈಲ್ವೆ ನಿಲ್ದಾಣದಲ್ಲಿ ದಂಪತಿಗಳಿಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಪಕ್ಕದಲ್ಲೇ ಏನೂ ಅರಿಯದ ಎರಡು ವರ್ಷದ ಪುಟ್ಟ ಕಂದಮ್ಮ ಕುಳಿತು ತಿಂಡಿ ತಿನ್ನುತ್ತಿರುವ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ.
ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಗದಗ ಜಿಲ್ಲೆಯ ಅಣ್ಣಿಗೇರಿ ಮೂಲದ ವೀರಣ್ಣ (55) ಮತ್ತು 45ರ ಹರೆಯದ ಪತ್ನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ದಂಪತಿಗಳು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಎರಡು ವರ್ಷದ(ದೇವರಾಜು) ಪುಟ್ಟ ಕಂದನಿಗೆ ತನ್ನ ಅಪ್ಪ, ಅವ್ವ ಸಾವನ್ನಪ್ಪಿದ್ದಾರೆ ಅನ್ನೋದೇ ತಿಳಿದಿಲ್ಲವಾಗಿತ್ತು. ತಂದೆ, ತಾಯಿ ಹೆಣದ ಸಮೀಪವೇ ಕುಳಿತ ಮುಗ್ಧ ಕಂದಮ್ಮನ ದೃಶ್ಯ ಮನಕಲಕುವಂತಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪುಟ್ಟ ಕಂದಮ್ಮನನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದು, ಅಪ್ಪ, ಅಮ್ಮನನ್ನು ಕಳೆದುಕೊಂಡಿರುವ ಕಂದ ಅನಾಥವಾಗಿದೆ.
ಗದಗ ಜಿಲ್ಲಾಸ್ಪತ್ರೆಗೆ ದಂಪತಿ ಮೃತದೇಹವನ್ನು ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT