ಅರವಿಂದ್ ಜಾಧವ್ 
ರಾಜ್ಯ

ಜಾಧವ್ ಭೂಕಬಳಿಕೆ ಪ್ರಕರಣ; ಬೆಂಗಳೂರು ನಗರ ಡಿಸಿಗೆ ಎಸಿಬಿ ನೋಟಿಸ್

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ...

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಅವರಿಗೆ ಎಸಿಬಿ ಅಧಿಕಾರಿಗಳು ಬುಧವಾರ ನೋಟಿಸ್ ಜಾರಿ ಮಾಡಿದ್ದಾರೆ.
ಅರವಿಂದ್ ಜಾದವ್ ಅವರ ತಾಯಿ ತಾರಾಭಾಯ್ ಅವರಿಗೆ ಸೇರಿದ ಭೂ ದಾಖಲೆಗಳ ವಿವರ ನೀಡುವಂತೆ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿ ಶಂಕರ್ ಅವರಿಗೆ ನೋಟಿಸ್ ನೀಡಿದ್ದಾರೆ.
ಜಾಧವ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ತಾಯಿ ತಾರಾಭಾಯ್ ಹೆಸರಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ನಿನ್ನೆ ಆರ್ ಟಿ ಐ ಕಾರ್ಯಕರ್ತ ಎಸ್.ಭಾಸ್ಕರನ್ ಅವರು ಎಸಿಬಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಇಂದು ಡಿಸಿಗೆ ನೋಟಿಸ್ ಜಾರಿ ಮಾಡಿದೆ.
ಇನ್ನು ತಮ್ಮ ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿರುವ ಜಾಧವ್ ಅವರು, 
ಭೂಮಿ ಖರೀದಿಗೆ ಸಂಬಂಧಿಸಿದಂತೆ ಕಾನೂನು ಉಲ್ಲಂಘನೆಯಾಗಲಿ, ಅಕ್ರಮವಾಗಲಿ ನಡೆದಿಲ್ಲ. ನನ್ನ ತಾಯಿ ಊರಿನಲ್ಲಿದ್ದ ತಮ್ಮ ಜಮೀನು ಮಾರಿ ಬೆಂಗಳೂರಿನಲ್ಲಿ ಜಮೀನು ಖರೀದಿಸಿದ್ದರು. ಆ ಭೂಮಿ ಖರೀದಿ ವೇಳೆ ಸರ್ಕಾರಿ ಭೂಮಿ ಆಗಿರಲಿಲ್ಲ. ಅಲ್ಲದೇ ನನ್ನ ತಾಯಿ ಭೂಮಿ ಖರೀದಿಸುವ ವೇಳೆ ನಾನು ಕೇಂದ್ರದ ಸೇವೆಯಲ್ಲಿದ್ದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT