ಅರವಿಂದ್ ಜಾಧವ್ 
ರಾಜ್ಯ

ಜಾಧವ್ ಭೂಕಬಳಿಕೆ ಪ್ರಕರಣ; ಬೆಂಗಳೂರು ನಗರ ಡಿಸಿಗೆ ಎಸಿಬಿ ನೋಟಿಸ್

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ...

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ಶಂಕರ್ ಅವರಿಗೆ ಎಸಿಬಿ ಅಧಿಕಾರಿಗಳು ಬುಧವಾರ ನೋಟಿಸ್ ಜಾರಿ ಮಾಡಿದ್ದಾರೆ.
ಅರವಿಂದ್ ಜಾದವ್ ಅವರ ತಾಯಿ ತಾರಾಭಾಯ್ ಅವರಿಗೆ ಸೇರಿದ ಭೂ ದಾಖಲೆಗಳ ವಿವರ ನೀಡುವಂತೆ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿ ಶಂಕರ್ ಅವರಿಗೆ ನೋಟಿಸ್ ನೀಡಿದ್ದಾರೆ.
ಜಾಧವ್ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ತಾಯಿ ತಾರಾಭಾಯ್ ಹೆಸರಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ನಿನ್ನೆ ಆರ್ ಟಿ ಐ ಕಾರ್ಯಕರ್ತ ಎಸ್.ಭಾಸ್ಕರನ್ ಅವರು ಎಸಿಬಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಇಂದು ಡಿಸಿಗೆ ನೋಟಿಸ್ ಜಾರಿ ಮಾಡಿದೆ.
ಇನ್ನು ತಮ್ಮ ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿರುವ ಜಾಧವ್ ಅವರು, 
ಭೂಮಿ ಖರೀದಿಗೆ ಸಂಬಂಧಿಸಿದಂತೆ ಕಾನೂನು ಉಲ್ಲಂಘನೆಯಾಗಲಿ, ಅಕ್ರಮವಾಗಲಿ ನಡೆದಿಲ್ಲ. ನನ್ನ ತಾಯಿ ಊರಿನಲ್ಲಿದ್ದ ತಮ್ಮ ಜಮೀನು ಮಾರಿ ಬೆಂಗಳೂರಿನಲ್ಲಿ ಜಮೀನು ಖರೀದಿಸಿದ್ದರು. ಆ ಭೂಮಿ ಖರೀದಿ ವೇಳೆ ಸರ್ಕಾರಿ ಭೂಮಿ ಆಗಿರಲಿಲ್ಲ. ಅಲ್ಲದೇ ನನ್ನ ತಾಯಿ ಭೂಮಿ ಖರೀದಿಸುವ ವೇಳೆ ನಾನು ಕೇಂದ್ರದ ಸೇವೆಯಲ್ಲಿದ್ದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel