ಭಾಸ್ಕರ್ ಶೆಟ್ಟಿ ಪುತ್ರ ನವನೀತ್ ಮತ್ತು ನಿರಂಜನ್ ಭಟ್ 
ರಾಜ್ಯ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಉದ್ಯಮಿಯ ತಾಯಿ, ಸಹೋದರನ ಡಿಎನ್ ಎ ಪರೀಕ್ಷೆಗೆ ಕೋರ್ಟ್ ಅನುಮತಿ

ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ, ಭಾಸ್ಕರ್ ಶೆಟ್ಟಿ ತಾಯಿ ಹಾಗೂ ಸಹೋದರನ ಡಿಎನ್ಎ ಪರೀಕ್ಷೆಗೆ ಉಡುಪಿ ಸ್ಥಳೀಯ ನ್ಯಾಯಾಲಯ ..

ಉಡುಪಿ: ಹೋಟೆಲ್ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ, ಭಾಸ್ಕರ್ ಶೆಟ್ಟಿ ತಾಯಿ ಹಾಗೂ ಸಹೋದರನ ಡಿಎನ್ಎ ಪರೀಕ್ಷೆಗೆ ಉಡುಪಿ ಸ್ಥಳೀಯ ನ್ಯಾಯಾಲಯ ಅನುಮತಿ ನೀಡಿದೆ.

ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಸೆಡ್ತಿ ಮತ್ತು ಸಹೋದರನ ಡಿಎನ್ ಎ ಪರೀಕ್ಷೆ ಮಾಡಲು ಅನುಮತಿಗಾಗಿ ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದರು. ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನದಿಯಿಂದ ಭಾಸ್ಕರ್ ಶೆಟ್ಟಿ ಮೂಳೆ ಸಂಗ್ರಹಿಸಿ ಡಿಎನ್ ಎ ಪರೀಕ್ಷೆಗೆ ಕಳುಹಿಸಲಿದ್ದಾರೆ.

ಭಾಸ್ಕರ್ ಶೆಟ್ಟಿ ಅವರನ್ನು ಕೊಲೆ ಮಾಡಿ ಹೋಮ ಕುಂಡದಲ್ಲಿ ಅವರ ದೇಹವನ್ನು ಸುಡಲಾಗಿತ್ತು, ನಂತರ ಅವಶೇಷವನ್ನು ಸಮೀಪದ ನದಿಗೆ ಬಿಡಲಾಗಿತ್ತು.

ಪ್ರಕರಣ ಸಂಬಂಧ ಮೂವರು ಆರೋಪಿಗಳಿಗೆ ಸೆಪ್ಟಂಬರ್ 6 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಯನ್ನು ಮಂಗಳೂರು ಜೈಲಿಗೂ ಹಾಗೂ ಪುತ್ರ ನವನೀತ್ ಮತ್ತು ಸ್ವಘೋಷಿತ ಜ್ಯೋತಿಷಿ ನಿರಂಜನ್ ಭಟ್ ಇಬ್ಬರನ್ನು ಜಿಲ್ಲಾ ಕಾರಾಗೃಹದಲ್ಲಿಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ

ಬಗೆಹರಿಯದ ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಜೊತೆಗಿನ ಶಾಂತಿ ಮಾತುಕತೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಪ್ರಯಾಣ?

ದೆಹಲಿಯಲ್ಲಿ ಗ್ರೆನೇಡ್ ದಾಳಿಗೆ ಸಂಚು: ಇಬ್ಬರು ISI ಕಾರ್ಯಕರ್ತರ ಬಂಧನ

ಎಂಜಿಆರ್, ಶಿವಾಜಿ ಗಣೇಶನ್ ತೊಡೆ ಮೇಲೆ ಕೂತು ಬೆಳೆದವನು ನಾನು, ಆದರೂ....: ನಟ ವಿಜಯ್‌ಗೆ ತಿರುಗೇಟು ನೀಡಿದ ಕಮಲ್ ಹಾಸನ್!

ಧರ್ಮದ ವಿಚಾರವಾಗಿ ಆನ್ ಲೈನ್ ನಲ್ಲಿ ವಿವಾದಕ್ಕೆ ಗುರಿಯಾದ 'The Rebel Kid' ಅಪೂರ್ವ ಮುಖಿಜಾ! Video ನೋಡಿ...

SCROLL FOR NEXT