ಬಿಡಿಎ ಫ್ಲ್ಯಾಟ್ (ಸಾಂದರ್ಭಿಕ ಚಿತ್ರ) 
ರಾಜ್ಯ

ರಾಜಕಾಲುವೆ ಒತ್ತುವರಿ ತೆರವು: ಸಂತ್ರಸ್ತರಿಗೆ ಬಿಡಿಎ ಫ್ಲ್ಯಾಟ್ ಅಥವಾ ಸೈಟ್?

ಸಿಲಿಕಾನ್ ಸಿಟಿಯ ವಿವಿಧ ಭಾಗಗಳಲ್ಲಿ ರಾಜಕಾಲುವೆ ಒತ್ತುವರಿ ತೆರವು ಮುಂದುವರೆದಿದ್ದು, ತೆರವಿನಿಂದ ಮನೆ ಕಳೆದುಕೊಂಡು ಬೀದಿಗೆ....

ಬೆಂಗಳೂರು: ಸಿಲಿಕಾನ್ ಸಿಟಿಯ ವಿವಿಧ ಭಾಗಗಳಲ್ಲಿ ರಾಜಕಾಲುವೆ ಒತ್ತುವರಿ ತೆರವು ಮುಂದುವರೆದಿದ್ದು, ತೆರವಿನಿಂದ ಮನೆ ಕಳೆದುಕೊಂಡು ಬೀದಿಗೆ ಬರುವ ನಿರ್ಗತಿಕರಿಗೆ ಬಿಡಿಎ ವತಿಯಿಂದ ಫ್ಲ್ಯಾಟ್ ಅಥವಾ ನಿವೇಶನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯಿಂದ ಮನೆ ಕಳೆದುಕೊಂಡವರಿಗೆ ಹೇಗೆ ಪರಿಹಾರ ಒದಗಿಸುವುದು ಎಂಬುದರ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ನಗರದ ಸಚಿವರು, ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಮೇಯರ್ ಮುಖ್ಯಮಂತ್ರಿ ಮನವಿ ಮಾಡಿದರು.
ರಾಜಕಾಲುವೆ ಒತ್ತುವರಿ ತೆರವಿನಿಂದ ಮನೆ ಮಠ ಕಳೆದುಕೊಳ್ಳುವ ಬಡಜನರನ್ನು ಗುರುತಿಸಲು ಶೀಘ್ರ ಸಮೀಕ್ಷೆ ನಡೆಸಿ ಅಂತಹವರಿಗೆ ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಫ್ಲ್ಯಾಟ್ ಇಲ್ಲವೇ ನಿವೇಶನ ನೀಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಭೆಯ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆರೆಯಿಂದ ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ 38 ಸ್ಥಳಗಳನ್ನು ಗುರುತಿಸಿದ್ದು, ಆ ಒತ್ತುವರಿಯನ್ನು ತಕ್ಷಣ ತೆರವುಗೊಳಿಸಿ. ಮಳೆ ಬಂದರೆ ಈ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಹೇಳಿದರು.
ಇನ್ನುಳಿದ ಒತ್ತುವರಿಯನ್ನು ಆದ್ಯತೆ ಮೇಲೆ ತೆರವು ಮಾಡುವಂತೆ ಸೂಚಿಸಿದ್ದು, ತೆರವಿನ ವೇಳೆ ಮನೆ, ನಿವೇಶನ ಕಳೆದುಕೊಳ್ಳುವವರಿಗೆ ಪರ್ಯಾಯ ರಕ್ಷಣೆ ಮಾಡುವಂತೆಯೂ ಸೂಚಿಸಿದ್ದಾರೆ ಎಂದರು.
ಈ ವೇಳೆ ಮಾತನಾಡಿದ ಮೇಯರ್ ಮಂಜುನಾಥರೆಡ್ಡಿ ಅವರು, ರಾಜಕಾಲುವೆ ಒತ್ತುವರಿಯಿಂದ ತೆರವಿನಿಂದ ಮನೆ ಕಳೆದುಕೊಂಡಿರುವವರಿಗೆ ಬಿಡಿಎನಿಂದ ಫ್ಲ್ಯಾಟ್ ವಿತರಿಸುವ ಬಗ್ಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT