ಸಿ ಶಿಖಾ 
ರಾಜ್ಯ

20 ದಿನದಲ್ಲಿ ಸಿ. ಶಿಖಾಗೆ 2ನೇ ವರ್ಗಾವಣೆ

ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ವಿರುದ್ಧ ದೂರು ನೀಡಿ ಆತ ಜೈಲಿಗೆ ಹೋಗಲು ಕಾರಣರಾಗಿದ್ದ ಐಎಎಸ್ ಅಧಿಕಾರಿ ಸಿ.ಶಿಖಾ ಅವರನ್ನು 20 ದಿನದಲ್ಲಿ 2ನೇ ಬಾರಿ...

ಮೈಸೂರು: ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ವಿರುದ್ಧ ದೂರು ನೀಡಿ ಆತ ಜೈಲಿಗೆ ಹೋಗಲು ಕಾರಣರಾಗಿದ್ದ ಐಎಎಸ್ ಅಧಿಕಾರಿ ಸಿ.ಶಿಖಾ ಅವರನ್ನು 20 ದಿನದಲ್ಲಿ 2ನೇ ಬಾರಿ ವರ್ಗಾವಣೆ ಮಾಡಲಾಗಿದೆ.

ಶಿಖಾರವನ್ನು ಕೆಲ ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಪಿಯು ಇಲಾಖೆ ನಿರ್ದೇಶಕರಾಗಿ ನೇಮಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿ ಶಿಖಾ ಅವರಿಗೆ ಧಮಕಿ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಕೆ. ಮರಿ ಗೌಡ ಜೈಲುಪಾಲಾಗುವಂತೆ ಮಾಡಿದ್ದರು.

2004ರ ಬ್ಯಾಚಿನ ಐಎಎಸ್ ಅಧಿಕಾರಿ ಸಿ ಶಿಖಾ ಅವರು ಮಾರ್ಚ್ 27, 2013ರಂದು ಮೈಸೂರಿನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ತಿರುಚನಾಪಳ್ಳಿಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದ ಶಿಖಾ ಅವರು ಇದಕ್ಕೂ ಮುನ್ನ ಗದ ಜಿಲ್ಲಾಧಿಕಾರಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT