ಮೃತ ಮಹಿಳೆ ತಿಮ್ಮಮ್ಮ 
ರಾಜ್ಯ

ಪ್ರಿಯಕರನ ಜೊತೆ ಸೇರಿ ಮಹಿಳೆ ಅಪಹರಿಸಿ ಹತ್ಯೆ; ಮಂಡ್ಯದಲ್ಲಿ ಶವ ಸುಟ್ಟ ಕಿರಾತಕಿ ಬಂಧನ

ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಅಪಹರಿಸಿ, ಉಸಿರುಗಟ್ಟಿಸಿ ಕೊಂದು ಮಂಡ್ಯದಲ್ಲಿ ಸುಟ್ಪುಹಾಕಿರುವ ಘಟನೆ ನಡೆದಿದೆ.

ಬೆಂಗಳೂರು: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಅಪಹರಿಸಿ, ಉಸಿರುಗಟ್ಟಿಸಿ ಕೊಂದು ಮಂಡ್ಯದಲ್ಲಿ ಸುಟ್ಪುಹಾಕಿರುವ ಘಟನೆ ನಡೆದಿದೆ.

ಪ್ರಿಯಕರನ ಜತೆ ಸೇರಿ ತಿಮ್ಮಮ್ಮ ಎಂಬ ಮಹಿಳೆಯನ್ನು ಕಾರಿನಲ್ಲಿ ಅಪಹರಿಸಿದ್ದ ಶೀಲಾ ಎಂಬಾಕೆ, ಅವರನ್ನು ಉಸಿರುಗಟ್ಟಿಸಿ ಹತ್ಯೆಗೈದು ಮಂಡ್ಯದಲ್ಲಿ ಶವ ಸುಟ್ಟು ಹಾಕಿದ್ದಾಳೆ. ಈ ಸಂಬಂಧ ಶೀಲಾಳನ್ನು ಬಂಧಿಸಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು, ಆಕೆಯ ಪ್ರಿಯಕರ ಅರುಣ್‌ಗಾಗಿ ಶೋಧ ನಡೆಸುತ್ತಿದ್ದಾರೆ.

ತಾವು ಮೈಸೂರಿಗೆ ಟ್ರಿಪ್ ಹೋಗುತ್ತಿರುವುದಾಗಿ ಅಲ್ಲಿ ನೀಡಬೇಕಾದ ಹಣ ಕೊಡುವುದಾಗಿ ನಂಬಿಸಿ ಕರೆದೊಯ್ದ ಶೀಲಾ  ಮತ್ತು ಆಕೆಯ ಪ್ರಿಯಕರ ಸೇರಿ,. ತಿಮ್ಮಮ್ಮ ಅವರನ್ನು ಮಾರ್ಗಮಧ್ಯೆ ಉಸಿರುಗಟ್ಟಿಸಿ ಸಾಯಿಸಿದ್ದರು. ಬಳಿಕ ಶವವನ್ನು ಡಿಕ್ಕಿಯಲ್ಲಿ ಹಾಕಿಕೊಂಡು, ರಾತ್ರಿ ಮಂಡ್ಯದ ಹನಗೆರೆ ಗ್ರಾಮಕ್ಕೆ ತೆರಳಿದ್ದರು. ಮೃತರ ಮೈಮೇಲಿದ್ದ ಆಭರಣಗಳನ್ನು ಬಿಚ್ಚಿಕೊಂಡ ಹಂತಕರು, ಪೆಟ್ರೋಲ್ ಸುರಿದು ಮೃತದೇಹವನ್ನು ಸುಟ್ಟು ಹಾಕಿ ಬೆಳಗಿನ ಜಾವ ನಗರಕ್ಕೆ ಮರಳಿದ್ದರು.

ತಮ್ಮ ತಾಯಿ ರಾತ್ರಿ ಆದರು ವಾಪಸ್ ಬರದ ಕಾರಣ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ತಿಮ್ಮಮ್ಮ ಪುತ್ರ ದೂರು ದಾಖಲಿಸಿದ್ದರು.  ಮಹಿಳೆಯ ಶವ ಪತ್ತೆಯಾಗಿರುವ ಬಗ್ಗೆ ಮಂಡ್ಯ ಪೊಲೀಸರು ನಿಯಂತ್ರಣ ಕೊಠಡಿಗೆ ಫೋಟೊ ಸಹಿತ ಮಾಹಿತಿ ಕೊಟ್ಟಿದ್ದರು. ಆ ಸುಳಿವು ಆಧರಿಸಿ ನಮ್ಮ ಸಿಬ್ಬಂದಿ ತಿಮ್ಮಮ್ಮ ಅವರ ಕುಟುಂಬ ಸದಸ್ಯರ ಜತೆ ಮಂಡ್ಯಕ್ಕೆ ತೆರಳಿದರು. ಮೃತದೇಹ ಗುರುತಿಸಿದ ಅವರ ಮಗ, ಹಣದಾಸೆಗೆ ಶೀಲಾಳೇ ಈ ಕೃತ್ಯ ಎಸಗಿರಬಹುದು ಎಂಬ ಶಂಕೆಯನ್ನೂ ವ್ಯಕ್ತಪಡಿಸಿದರು  ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಶೀಲಾಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆಕೆ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸಿರುವ ಪೊಲೀಸರು ಚೀಟಿ ವ್ಯವಹಾರ ಹಾಗೂ ಹಣಕಾಸಿನ ವಿವಾದ ಸಂಬಂಧ ಈ ಕೊಲೆ ನಡೆದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT