ಅರವಿಂದ್ ಜಾಧವ್ 
ರಾಜ್ಯ

ಭೂ ಕಬಳಿಕೆ ಆರೋಪ: ಎಸಿಬಿಯಿಂದ ಅರವಿಂದ್ ಜಾದವ್ ವಿರುದ್ಧ ತನಿಖೆ

ಅಕ್ರಮ ಭೂಕಬಳಿಕೆ ಆರೋಪ ಹೊತ್ತಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ...

ಬೆಂಗಳೂರು: ಅಕ್ರಮ ಭೂಕಬಳಿಕೆ ಆರೋಪ ಹೊತ್ತಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ವಿಧಾನ ಸೌಧದಲ್ಲಿರುವ ರೆಕಾರ್ಡ್ ರೂಂ ಗೆ ಸೋಮವಾರ ಭೇಟಿ ನೀಡಿದ ಅಧಿಕಾರಿಗಳು ಭೂಅಕ್ರಮ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಮುಖ್ಯ ಕಾರ್ಯದರ್ಶಿಗಳ ಉಸ್ತುವಾರಿಯಿರುವ ರೆಕಾರ್ಡ್ ರೂಂ ನಿಂದ ಅಧಿಕಾರಿಗಳು ಕೆಲವೊಂದು ದಾಖಲೆ ಕಡತ ತೆಗೆದುಕೊಂಡು ಹೋದರೆಂದು ಮೂಲಗಳು ತಿಳಿಸಿವೆ.

ಎಸಿಬಿ ಅಧಿಕಾರಿಗಳು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿರುವ ರೆವಿನ್ಯೂ ಇಲಾಖೆಗೂ ಭೇಟಿ ನೀಡಿದ ಅವರು, 2002 ರ ಆನೇಕಲ್ ನಲ್ಲಿ ಅರವಿಂದ್ ಜಾಧವ್ ಅವರ ತಾಯಿ ತಾರಾಬಾಯಿ ಖರೀದೀಸಿದ ಭೂಮಿಯ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರ 9 ಮಂದಿಗೆ ಹಂಚಿಕೆ ಮಾಡಿದ್ದ 8 ಎಕರೆ ಭೂಮಿಯನ್ನು ಜಾದವ್ ತಾಯಿ ಖರೀದಿಸಿದ್ದಾರೆ ಎಂದು ಆರ್ ಟಿ ಐ ಕಾರ್ಯಕರ್ತ ಸಲ್ಲಿಸಿದ್ದ ದೂರಿನ ಅನ್ವಯ ಎಸಿಬಿ ಆಧಿಕಾರಿಗಳು ತನವಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT