ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ 
ರಾಜ್ಯ

ಎಂ.ಎಂ. ಕಲಬುರ್ಗಿ ಹತ್ಯೆಯಾಗಿ 1 ವರ್ಷ: ಹಂತಕರ ಪತ್ತೆ ಇನ್ನೂ ನಿಗೂಢ

ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿಯವರ ಹತ್ಯೆಯಾಗಿ ಒಂದು ವರ್ಷ ಕಳೆದಿದ್ದರೂ, ಹಂತಕರ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ...

ಧಾರವಾಡ: ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿಯವರ ಹತ್ಯೆಯಾಗಿ ಒಂದು ವರ್ಷ ಕಳೆದಿದ್ದರೂ, ಹಂತಕರ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ.

2015ರ ಆ.30 ರಂದು ಕಲ್ಯಾಣನಗರದಲ್ಲಿ ಡಾ.ಕಲಬುರ್ಗಿಯವರ ಹತ್ಯಾಯಾಗಿದ್ದು. ಘಟನೆ ನಡೆದ ಮರುದಿನವೇ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಹತ್ಯೆಯಾಗಿ ಸಾಕಷ್ಟು ಸಮಯವಾದರೂ ಹಂತಕರ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿ 22 ತಂಡಗಳನ್ನು ರಚಿಸಿತ್ತು. ಇದರಂತೆ 36ಕ್ಕೂ ಹೆಚ್ಚು ಅಧಿಕಾರಿಗಳು ಹಂತಕರಿಗಾಗಿ ಹುಡುಕಾಡುತ್ತಿದ್ದಾರೆ. ಆದರೆ, ಹತ್ಯೆಯಾಗಿ ಇಂದಿಗೆ ವರ್ಷ ಕಳೆದರೂ ಯಾವುದೇ ಸುಳಿವುಗಳು ಸಿಕ್ಕಲ್ಲ.

ಮಹಾರಾಷ್ಟ್ರದಲ್ಲಿ ಹತ್ಯೆಯಾದ ಡಾ.ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧಿರಾದ ಹಂತಕರೇ ಕಲಬುರ್ಗಿಯವರ್ನು ಹತ್ಯೆ ಮಾಡಿರಬಹುದು ಎಂಬ ಹಲವು ಸಂಶಯಗಳನ್ನು ಪೊಲೀಸರು ಈ ಹಿಂದೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದಾಬೋಲ್ಕರ್ ಹತ್ಯೆಯಲ್ಲಿ ಬಂಧಿತನಾಗಿರುವ ವಿರೇಂದ್ರ ತಾವಡೆಯನ್ನು ತಮಗೆ ಒಪ್ಪಿಸುವಂತೆ ಸಿಐಡಿ ಅಧಿಕಾರಿಗಳು ಸಿಬಿಐ ಬಳಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಸಿಬಿಐ ಅಧಿಕಾರಿಗಳು ಇದಕ್ಕೆ ಈ ವರೆಗೂ ಒಪ್ಪಿಗೆ ನೀಡಿಲ್ಲ. ಒಂದು ವೇಳೆ ಸಿಬಿಐ ಅಧಿಕಾರಿಗಳು ಗ್ನೀನ್ ಸಿಗ್ನಲ್ ನೀಡಿದ್ದೇ ಆದರೆ, ಈ ಬಗ್ಗೆ  ಮಾಹಿತಿ ಸಿಗಬಹುದೆಂದು ರಾಜ್ಯ ಪೊಲೀಸರು ನಂಬಿದ್ದಾರೆ.

ಪ್ರತಿಭಟನೆಗೆ ಮುಂದಾಗಿರುವ ಹಲವು ಸಂಘಟನೆಗಳು
ಕಲುಬುರ್ಗಿಯವರ ಹತ್ಯೆಯಾಗಿ ಒಂದು ವರ್ಷಗಳೂ ಕಳೆದಿದ್ದರೂ, ಹಂತಕರ ಬಂಧಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಸಂಘಟನೆಗಳು ಇಂದು ಧಾರವಾಡದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

ಕಲಬುರ್ಗಿಯವರ ನಿವಾಸ ಕಲ್ಯಾಣ ನಗರದಿಂದ ಕಾಲ್ನಡಿಗೆ ಮೂಲಕ ಪ್ರತಿಭಟನೆ ನಡೆಸಲು ಹಲವು ಸಂಘಟನೆಗಳು ತೀರ್ಮಾನಿಸಿದ್ದು, ಇಂದು ಬೆಳಿಗ್ಗೆಯಿಂದಲೇ ಪ್ರತಿಭಟನೆಗಳನ್ನು ಆರಂಭಿಸಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT