ಶಾಲಾ ವ್ಯಾನು ಡ್ರೈವರ್ ಆನಂದ 
ರಾಜ್ಯ

ಮತ್ತೊಬ್ಬ ಪಾನಮತ್ತ ಶಾಲಾ ವ್ಯಾನು ಚಾಲಕ ಬಂಧನ

ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಮತ್ತೊಂದು ಪ್ರಕರಣ ನಡೆದಿದೆ. ನಿನ್ನೆ ಯಲಹಂಕದ...

ಬೆಂಗಳೂರು: ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಮತ್ತೊಂದು ಪ್ರಕರಣ ನಡೆದಿದೆ. ನಿನ್ನೆ ಯಲಹಂಕದ ವೆಂಕಟಲ ಎಂಬಲ್ಲಿ ಮಧ್ಯಾಹ್ನ 1.15ರ ಸುಮಾರಿಗೆ ಪಾನಮತ್ತ ಶಾಲಾ ವ್ಯಾನು ಚಾಲಕ ಹತೋಟಿ ಕಳೆದುಕೊಂಡು ಎರಡು ವಾಹನಗಳಿಗೆ ಢಿಕ್ಕಿ ಹೊಡೆದು ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್ 20 ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಯಲಹಂಕದ ನಾರಾಯಣ ಇ-ಟೆಕ್ನೋ ಶಾಲೆಯ ವ್ಯಾನ್ ಚಾಲಕ ಆನಂದನನ್ನು ಪೊಲೀಸರು ಪರೀಕ್ಷಿಸಿದಾಗ ಅನುಮತಿ ಮಿತಿಗಿಂತ 10 ಪಟ್ಟು ಹೆಚ್ಚು ಆಲ್ಕೋಹಾಲ್ ಸೇವಿಸಿರುವುದು ಪತ್ತೆಯಾಗಿದೆ. ಆಲಂದ್ 440 ಮಿಲಿ ಗ್ರಾಂ ಮದ್ಯಪಾನ ಸೇವಿಸಿದ್ದ ಎಂದು ಗೊತ್ತಾಗಿದೆ.
ನಿನ್ನೆ ಮತ್ತೊಬ್ಬ ಶಾಲಾ ವ್ಯಾನು ಚಾಲಕ ವೈಟ್ ಫೀಲ್ಡ್ ನಲ್ಲಿ ಮದ್ಯ ಸೇವಿಸಿ ಸಿಕ್ಕಿಬಿದ್ದಿದ್ದು, ಈ ಮೂಲಕ ಕಳೆದ ಎರಡು ವಾರಗಳಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸಿ ಸಿಕ್ಕಿಬಿದ್ದ ಪ್ರಕರಣ ಎಂಟಕ್ಕೇರಿದೆ.
ನಿಗದಿಗಿಂತ ಹೆಚ್ಚು ವೇಗವಾಗಿ ವ್ಯಾನನ್ನು ಚಾಲನೆ ಮಾಡುತ್ತಿದ್ದ ಆನಂದ್ ಮಕ್ಕಳನ್ನು ಮಧ್ಯಾಹ್ನ ಗಾಡಿಯಲ್ಲಿ ಹೇರಿಕೊಂಡು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಮೊದಲು ದ್ವಿಚಕ್ರ ವಾಹನಕ್ಕೆ, ನಂತರ ಆಟೋಗೆ ಹೋಗಿ ಢಿಕ್ಕಿ ಹೊಡೆದಿದ್ದಾನೆ. ನಂತರ ವಿಭಜಕಕ್ಕೆ ಹೋಗಿ ಢಿಕ್ಕಿ ಹೊಡೆದಿದ್ದಾನೆ. ಕೂಡಲೇ ಅಲ್ಲಿ ಸಾರ್ವಜನಿಕರು ಸೇರಿ ಮಕ್ಕಳನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಮಕ್ಕಳು ಭೀತರಾಗಿ ಅಳುತ್ತಿದ್ದರು.
ಸ್ಥಳಕ್ಕೆ ಧಾವಿಸಿದ ಯಲಹಂಕ ಸಂಚಾರ ಪೊಲೀಸರು ಚಾಲಕನನ್ನು ಬಂಧಿಸಿದರು. ಶಾಲಾ ಅಧಿಕಾರಿಗಳಿಗೆ ಬೇರೆ ಬಸ್ಸನ್ನು ಮಕ್ಕಳಿಗೆ ವ್ಯವಸ್ಥೆಗೊಳಿಸುವಂತೆ ಪೊಲೀಸರು ಸೂಚಿಸಿದರು.
ಚಾಲಕನ ವಿರುದ್ಧ ಅಜಾಗರೂಕತೆ ಮತ್ತು ವೇಗದ ಚಾಲನೆಯ ಕೇಸು ದಾಖಲಿಸಲಾಗಿದೆ.
ನಿನ್ನೆ ನಡೆದ ಮತ್ತೊಂದು ಘಟನೆಯಲ್ಲಿ, ದೆಹಲಿ ಪಬ್ಲಿಕ್ ಶಾಲೆಯ 30 ವರ್ಷದ ಚಾಲಕನನ್ನು ವೈಟ್ ಫೀಲ್ಡ್ ಸಂಚಾರ ಪೊಲೀಸರು ಬಂಧಿಸಿದ್ದರು. ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ರಾಮಚಂದ್ರ ಎಂಬಾತನ ವ್ಯಾನಿಗೆ ಸಣ್ಣ ಅಪಘಾತವಾಗಿತ್ತು. ಸ್ಥಳಕ್ಕೆ ಧಾವಿಸಿ ಪೊಲೀಸರು ತಪಾಸಣೆ ನಡೆಸಿದಾಗ ಆಲ್ಕೋಹಾಲ್ ಸೇವಿಸಿರುವುದು ಪತ್ತೆಯಾಗಿದೆ. ಆತನ ವಿರುದ್ದವೂ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!