ಕಾನೂನು ಸಚಿವ ಟಿ.ಬಿ. ಜಯಚಂದ್ರ 
ರಾಜ್ಯ

ಮಾಲ್ ಆಗಲಿ, ಕಾಂಪ್ಲೆಕ್ಸ್ ಆಗಲಿ ಒತ್ತುವರಿ ತೆರವುಗೊಳಿಸುತ್ತೇವೆ: ಟಿ.ಬಿ.ಜಯಚಂದ್ರ

ಮಾಲ್ ಆಗಲಿ, ಕಾಂಪ್ಲೆಕ್ಸ್ ಆಗಲಿ ಸಜೀವ ರಾಜಕಾಲುವೆ ಮೇಲಿನ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ...

ಬೆಂಗಳೂರು: ಮಾಲ್ ಆಗಲಿ, ಕಾಂಪ್ಲೆಕ್ಸ್ ಆಗಲಿ ಸಜೀವ ರಾಜಕಾಲುವೆ ಮೇಲಿನ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಬುಧವಾರ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಅವರು, 2011ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ತೀರ್ಪು ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ನಿರ್ದೇಶನವನ್ನು ಸರ್ಕಾರ ಅನುಸರಿಸುತ್ತಿದೆ. ಒತ್ತುವರಿ ಕಾರ್ಯದಲ್ಲಿ ಯಾವುದೇ ರೀತಿಯ ತಾರತಮ್ಯವನ್ನು ಮಾಡಲಾಗುತ್ತಿಲ್ಲ. ಒತ್ತುವರಿಯಲ್ಲಿ ಬಡವರು, ಶ್ರೀಮಂತರು ಎಂಬ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ.

ಬೆಳ್ಳಂದೂರು ಬಳಿ ಪ್ರೆಸ್ಟೀಜ್ ಕಂಪನಿ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರೆಸ್ಟೀಜ್ ಕಂಪನಿ ಸರ್ಕಾರ ಆಸ್ತಿಯಾದ ಭೂಮಿಯನ್ನು ದೊಡ್ಡಮಟ್ಟದಲ್ಲಿ ಒತ್ತುವರಿ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ರಾಜಾಜಿನಗರದಲ್ಲಿರುವ ಓರಿಯನ್ ಮಾಲ್ ಒತ್ತುವರಿ ತೆರವು ಕಾರ್ಯದಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವ ಕುರಿತಂತೆ ಮಾತನಾಡಿರುವ ಅವರು, ಈ ಕುರಿತಂತೆ ಮಾಹಿತಿ ಪರಿಶೀಲನೆ ನಂತರವಷ್ಟೇ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಬೆಳ್ಳಂದೂರು ಕೆರೆ ಬಳಿ ಪ್ರೆಸ್ಟೀಜ್ ಕಂಪನಿ ಮಾಡಿಕೊಂಡಿರುವ ಒತ್ತುವರಿ ಭೂಮಿಯನ್ನು ನೋಡಿ ಆಶ್ಚರ್ಯವಾಯಿತು. 100 ಅಡಿಯಿದ್ದ ಭೂಮಿ ಇದೀಗ ಕೇವಲ 10 ಅಡಿಯಿದೆ. ಪರಿಶೀಲನೆ ನಂತರ ಒತ್ತುವರಿಯನ್ನು ತೆರವುಗೊಳಿಸುವಂತೆ ಕೂಡಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ, ಬಿಲ್ಡರ್ಸ್ ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ.

ಕಂದಾಯ ಬಿಡಿಎ, ಬಿಬಿಎಂಪಿ ಅಧಿಕಾರಿಗಳು ಹಾಗೂ ಜನರ ಮಧ್ಯೆ ಹೊಂದಾಣಿಕೆಯಲ್ಲಿ ಸಮಸ್ಯೆಯುಂಟಾಗುತ್ತಿದ್ದು, ಇದರಿಂದ ಸಾಕಷ್ಟು ಗೊಂದಲಗಳು ಸೃಷ್ಟಿಯಾಗುತ್ತಿವೆ. ಕೆಲ ಅಧಿಕಾರಿಗಳು ಹಣವನ್ನು ಪಡೆಯುತ್ತಿರುವುದಾಗಿ ದೂರುಗಳು ಕೇಳಿಬರುತ್ತಿವೆ. ರಾಜಕಾಲುವೆಯಿಂದ ಹೊರತಾದ ಕಟ್ಟಡಗಳನ್ನು ಒಡೆಯುವುದಿಲ್ಲ. ಯಾರಾದರೂ ಹಣವನ್ನು ಕೇಳಿದರೆ ಜನರು ಕೊಡಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT