ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ ಶಾಲೆಗೆ ಹೋಗದಿರುವ ಮಕ್ಕಳ ಸಂಖ್ಯೆ 1.6 ಲಕ್ಷ: ಸಮೀಕ್ಷೆ ವರದಿ

ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆ ಕರ್ನಾಟಕದಲ್ಲಿ 9,468 ಎಂದು ರಾಜ್ಯ ಸರ್ಕಾರ...

ಬೆಂಗಳೂರು: ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆ ಕರ್ನಾಟಕದಲ್ಲಿ 9,468 ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ ಕೂಡ ಸರ್ಕಾರದ ಸ್ವಾಯತ್ತ ಸಂಸ್ಥೆಯೊಂದು ನಡೆಸಿದ ಸಮೀಕ್ಷೆ ಇದನ್ನು ಸುಳ್ಳು ಎಂದು ಸಾಬೀತುಪಡಿಸಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಡೆಸಿದ ಸಮೀಕ್ಷೆಯಲ್ಲಿ, ನಮ್ಮ ರಾಜ್ಯದಲ್ಲಿ ಶಾಲೆಗೆ ಹೋಗದಿರುವ ಮಕ್ಕಳ ಸಂಖ್ಯೆ 1.61 ಲಕ್ಷವಿದೆ. ಕಳೆದ ಜನವರಿಯಲ್ಲಿ ಸರ್ವಶಿಕ್ಷ ಅಭಿಯಾನ ನಡೆಸಿದ್ದ ಸಮೀಕ್ಷೆಯಲ್ಲಿ 9,000 ಮಕ್ಕಳು ಎಂದು ಹೇಳಲಾಗಿತ್ತು. ಆದರೆ ಇದೀಗ ಆಯೋಗ ನಡೆಸಿರುವ ಸಮೀಕ್ಷೆಯಲ್ಲಿ ಅದು 20 ಪಟ್ಟು ಹೆಚ್ಚಾಗಿದೆ.
ಇತ್ತೇಚೆಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವದೇಕರ್ ಲೋಕಸಭೆಯಲ್ಲಿ ಹೇಳಿಕೆ ನೀಡಿ, ಕರ್ನಾಟಕದಲ್ಲಿ 1.22 ಲಕ್ಷ ಶಾಲೆಯಿಂದ ಹೊರಗುಳಿದಿರುವ ಮಕ್ಕಳಿದ್ದಾರೆ ಎಂದಿದ್ದರು. ಈ ಸಂಖ್ಯೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸರ್ವ ಶಿಕ್ಷಾ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ಸಿ.ಪಿ.ಜಾಫರ್, ನಮ್ಮ ಮೊದಲ ಸಮೀಕ್ಷೆಯಲ್ಲಿ ರಾಜ್ಯದಲ್ಲಿ 1.20 ಲಕ್ಷ ಮಂದಿ ಮಕ್ಕಳು ಶಾಲೆಗೆ ಹೋಗದೆ ಉಳಿದಿದ್ದಾರೆ ಎಂದು ತಿಳಿದುಬಂದಿತ್ತು. ನಂತರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತಂದು ಜನವರಿ 2016ರಲ್ಲಿ ಮರು ಸಮೀಕ್ಷೆ ನಡೆಸಿದಾಗ ಶಾಲೆಗೆ ಹೋಗದಿರುವ ಮಕ್ಕಳ ಸಂಖ್ಯೆ 9,000 ಕಂಡುಬಂತು ಎಂದಿದ್ದಾರೆ.
ಆದರೆ ಮಕ್ಕಳ ಹಕ್ಕು ಆಯೋಗ 'ಶಾಲೆ ಕಡೆಗೆ, ನನ್ನ ನಡಿಗೆ' ಯೋಜನೆಯಡಿ ನಡೆಸಿದ ಸಮೀಕ್ಷೆ ಇತ್ತೀಚಿನದ್ದಾಗಿದೆ. ಇದರ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಸಮೀಕ್ಷೆಯ ವರದಿ ಸಿಕ್ಕಿದೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಆಯೋಗದ ಉನ್ನತಾಧಿಕಾರಿಯೊಬ್ಬರು, ರಾಜ್ಯಾದ್ಯಂತ ಇರುವ ಮಕ್ಕಳು ಮತ್ತು ಪೋಷಕರ ಸಂಪರ್ಕ ಪಡೆದು ನಾವು ಸಮೀಕ್ಷೆ ನಡೆಸಿದ್ದೇವೆ. ವರದಿಯನ್ನು ಶಿಕ್ಷಣ ಇಲಾಖೆಗೆ ಸಲ್ಲಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT