ಡಾ.ಬರಗೂರು ರಾಮಚಂದ್ರಪ್ಪ 
ರಾಜ್ಯ

82ನೇ ಕನ್ನಡ ಸಾಹಿತ್ಯ ಸಮ್ಮೇಳನ ಧ್ವಜಾರೋಹಣ ಮುಕ್ತಾಯ: ಉದ್ಘಾಟನೆಗೆ ಕ್ಷಣಗಣನೆ

82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ...

ರಾಯಚೂರು: 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಕನ್ನಡದ ತೇರು ಎಳೆಯಲು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಸಜ್ಜಾಗಿದ್ದಾರೆ.ಇಂದು ಬೆಳಗ್ಗೆ 11 ಗಂಟೆಗೆ ರಾಯಚೂರಿನ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆರಂಭವಾಗುವ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಈಗಾಗಲೇ ಸಮ್ಮೇಳನದ ಪ್ರಧಾನ ವೇದಿಕೆಯ ಮುಂಭಾಗದಲ್ಲಿ ಧ್ವಜಾರೋಹಣ ಮುಕ್ತಾಯಗೊಂಡಿತು. ಇದೀಗ ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಭವ್ಯ ಮೆರವಣಿಗೆ ನಗರದ ಕರ್ನಾಟಕ ಸಂಘದಿಂದ ಆರಂಭಗೊಂಡಿದೆ. 
ಆರು ದಶಕಗಳ ನಂತರ ರಾಯಚೂರಿನಲ್ಲಿ ಮತ್ತೊಮ್ಮೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಹಜವಾಗಿ ಇಲ್ಲಿನ ಸಾಹಿತ್ಯಾಭಿಮಾನಿಗಳಲ್ಲಿ ಸಂತೋಷ, ಉತ್ಸಾಹ ಮೂಡಿಸಿದೆ.1955ರಲ್ಲಿ ಆದ್ಯ ರಂಗಾಚಾರ್ಯರ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆದಿತ್ತು.
ಇಂದು ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ, ಸಮ್ಮೇಳನಾಧ್ಯಕ್ಷ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಲಿದ್ದಾರೆ. 
ಇಂದು, ನಾಳೆ, ನಾಡಿದ್ದು ಮೂರು ದಿನಗಳ ಕಾಲ ಕನ್ನಡ ಸಾಹಿತ್ಯದ ಜಾತ್ರೆ ಜರುಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT