ಸಾಂಕೇತಿಕ ಚಿತ್ರ 
ರಾಜ್ಯ

ಬೆಂಗಳೂರು: ನವ ವಿವಾಹಿತೆ ಆತ್ಮಹತ್ಯೆ

20 ವರ್ಷದ ನವ ವಿವಾಹಿತೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ...

ಬೆಂಗಳೂರು: 20 ವರ್ಷದ ನವ ವಿವಾಹಿತೆ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಕುಟುಂಬ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ.
ಮೃತಪಟ್ಟ ಮಹಿಳೆಯನ್ನು ಕಾವ್ಯಾ ಎಂದು ಗುರುತಿಸಲಾಗಿದ್ದು, ಕೋಲಾರದ ಸಮತ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದಳು.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ನವೆಂಬರ್ 30ರಂದು ಕಾವ್ಯಾ ತನ್ನ ತಾಯಿ ಮನೆಗೆ ಬಂದಿದ್ದಳು. ತನ್ನ ಪೋಷಕರ ಬಳಿ ಗಂಡನ ಜತೆ ನಡೆಯುತ್ತಿರುವ ಜಗಳದ ಬಗ್ಗೆ ವಿವರಿಸಿದ್ದಳು. ಕೋಲಾರಕ್ಕೆ ಮತ್ತೆ ಹೋಗುವುದಿಲ್ಲ ಎಂದು ಹೇಳಿದ್ದಳು. ಈ ಘಟನೆಯಿಂದ ಬೇಸತ್ತು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೇಣು ಬಿಗಿದ ಸ್ಥಿತಿಯಲ್ಲಿದ್ದುದನ್ನು ಕಂಡ ಪೋಷಕರು ಪೊಲೀಸರಿಗೆ ತಿಳಿಸಿದರು. ಪೋಷಕರ ದೂರಿಗೆ ಮೇರೆಗೆ ಪೊಲೀಸರು ಕಾವ್ಯಾಳ ಪತಿ ಮತ್ತು ಮನೆಯವರನ್ನು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT