ಶ್ರೀ ಪಾಲಿಮರು ಮಠ 
ರಾಜ್ಯ

ನೋಟು ನಿಷೇಧ ಬಳಿಕ ತಂತ್ರಜ್ಞಾನ ಬಳಕೆಗೆ ಮುಂದಾದ ಪಲಿಮಾರು ಮಠ

ದೇಶದಲ್ಲಿ ನೋಟು ನಿಷೇಧದ ಬಳಿಕ ದೇಶದಲ್ಲಿ ಹಲವು ಮಹತ್ತರ ಘಟನೆಗಳು ನಡೆಯುತ್ತಿದ್ದು, ಇದೀಗ ಭಕ್ತರಿಂದ ಕಾಣಿಕೆ ಸಂಗ್ರಹಕ್ಕೆ ದೇವಸ್ಥಾನ ಹಾಗೂ ಮಠ ಮಾನ್ಯಗಳು...

ಉಡುಪಿ: ದೇಶದಲ್ಲಿ ನೋಟು ನಿಷೇಧದ ಬಳಿಕ ದೇಶದಲ್ಲಿ ಹಲವು ಮಹತ್ತರ ಘಟನೆಗಳು ನಡೆಯುತ್ತಿದ್ದು, ಇದೀಗ ಭಕ್ತರಿಂದ ಕಾಣಿಕೆ ಸಂಗ್ರಹಕ್ಕೆ ದೇವಸ್ಥಾನ ಹಾಗೂ ಮಠ ಮಾನ್ಯಗಳು ಇದೀಗ ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ. 
ಇತ್ತೀಚೆಗಷ್ಟೇ ಶಬರಿಮಲೆಯಲ್ಲಿ ಇ-ಹುಂಡಿ ಸೇವೆಗೆ ಚಾಲನೆ ನೀಡಲಾಯಿತು. ಭಕ್ತರು ತಮ್ಮ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಗಳನ್ನು ಸ್ವೈಪ್ ಮಾಡುವ ಮೂಲಕ ದೇವಸ್ಥಾನಕ್ಕೆ ಕಾಣಿಕೆ ಅರ್ಪಿಸಬಹುದಾಗಿತ್ತು. 
ಇದೇ ರೀತಿಯ ವ್ಯವಸ್ಥೆಯನ್ನು ಇದೀಗ ಅಷ್ಠ ಮಠಗಳಲ್ಲಿ ಒಂದಾದ ಉಡುಪಿಯ ಪಾಲಿಮರು ಮಠ ಸ್ವೈಪಿಂಗ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಹಣ ರಹಿತ ವಹಿವಾಟು ನಡೆಸುವ ಸಲುವಾಗಿ ಭಕ್ತರು ಮಠಕ್ಕೆ ಸ್ವೈಪ್ ಮಿಷನ್ ಅನ್ನು ದಾನ ನೀಡಿದ್ದಾರೆ. 
ಶ್ರೀ ಪಾಲಿಮರ್ ಮಠದ ಶ್ರೀಗಳಾದ ವಿದ್ಯಾದೇಶ ತೀರ್ಥ ಸ್ವಾಮೀಜಿಗಳು ನೋಟು ರದ್ದತಿಯಿಂದಾಗಿ ಹಣ ವರ್ಗಾವಣೆಗಾಗಿ ಡಿಜಿಟಲ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಭಕ್ತಾಧಿಗಳು ಸ್ವೈಪ್ ಮಾಡುವ ಮೂಲಕ ಮಠಕ್ಕೆ ಕಾಣಿಕೆ ನೀಡಬಹುದಾಗಿದೆ ಎಂದರು. 
ಸಚಿವ ಪ್ರಮೋದ್ ಮದ್ವರಾಜ್ ಅವರು ತಮ್ಮ ಡೆಬಿಟ್ ಕಾರ್ಡ್ ಅನ್ನು ಸ್ವೈಪ್ ಮಾಡುವ ಮೂಲಕ ಮಠಕ್ಕೆ ಕಾಣಿಕೆ ನೀಡಿದ ಮೊದಲ ದಾನಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT