ಚಿಕಿತ್ಸೆ ಪಡೆಯುತ್ತಿರುವ ಕಾಡಾನೆ ಸಿದ್ದ 
ರಾಜ್ಯ

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಸಿದ್ದ ಸಾವು

ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ.

ರಾಮನಗರ: ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ. 
ಆಗಸ್ಟ್ ತಿಂಗಳಲ್ಲಿ ಬನ್ನೇರುಘಟ್ಟದಿಂದ ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವೇಳೆಯಲ್ಲಿ ಕಾಡಾನೆಯ ಕಲು ಮುರಿದಿತ್ತು. ಕಾಲು ಮುರಿದುಕೊಂಡಿದ್ದ ಕಾಡಾನೆಗೆ ರಾಮನಗರದ ಮಂಚನಬೆಲೆಯ ಬಳಿ ಕಳೆದ 2-3 ತಿಂಗಳುಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ದಿನಗಳ ಕಾಲ ಅನಾರೋಗ್ಯ ಎದುರಿಸಿದ್ದ ಕಾಡಾನೆ ಚೇತರಿಕೆ ಕಾಣುವ ಲಕ್ಷಣಗಳು ಇರಲಿಲ್ಲ. ಆದರೆ ಕಳೆದ ಕೆಲವು ದಿನಗಳ ಹಿಂದೆ ಕಾಡಾನೆ ಸಿದ್ದ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಸಿದ್ದ ಮೃತಪಟ್ಟಿದೆ. 
ಕಾಡಾನೆ ಸಿದ್ದನ ಚಿಕಿತ್ಸೆಗಾಗಿ ಸರಕಾರ ಸಮಿತಿಯೊಂದನ್ನು ರಚಿಸಿ, ವ್ಯವಸ್ಥೆ ಮಾಡಿತ್ತು. ಅರಣ್ಯ ಇಲಾಖೆಯು ವೈಲ್ಡ್ ಲೈಫ್ ಎಸ್ ಒಎಸ್ ಎಂಬ ಸಂಸ್ಥೆ ಸಹಕಾರದ ಜತೆಗೆ ಸಿದ್ದನ ಚಿಕಿತ್ಸೆ ಬಗ್ಗೆ ನಿಗಾ ವಹಿಸುತ್ತಿತ್ತು. 25-30 ವರ್ಷದ ಕಾಡಾನೆಗೆ  ಗುವಾಹಟಿ ಹಾಗೂ ಕೇರಳದ ವೈದ್ಯರು ಚಿಕಿತ್ಸೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT