ಚಿಕಿತ್ಸೆ ಪಡೆಯುತ್ತಿರುವ ಕಾಡಾನೆ ಸಿದ್ದ 
ರಾಜ್ಯ

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಸಿದ್ದ ಸಾವು

ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ.

ರಾಮನಗರ: ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ. 
ಆಗಸ್ಟ್ ತಿಂಗಳಲ್ಲಿ ಬನ್ನೇರುಘಟ್ಟದಿಂದ ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವೇಳೆಯಲ್ಲಿ ಕಾಡಾನೆಯ ಕಲು ಮುರಿದಿತ್ತು. ಕಾಲು ಮುರಿದುಕೊಂಡಿದ್ದ ಕಾಡಾನೆಗೆ ರಾಮನಗರದ ಮಂಚನಬೆಲೆಯ ಬಳಿ ಕಳೆದ 2-3 ತಿಂಗಳುಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ದಿನಗಳ ಕಾಲ ಅನಾರೋಗ್ಯ ಎದುರಿಸಿದ್ದ ಕಾಡಾನೆ ಚೇತರಿಕೆ ಕಾಣುವ ಲಕ್ಷಣಗಳು ಇರಲಿಲ್ಲ. ಆದರೆ ಕಳೆದ ಕೆಲವು ದಿನಗಳ ಹಿಂದೆ ಕಾಡಾನೆ ಸಿದ್ದ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಸಿದ್ದ ಮೃತಪಟ್ಟಿದೆ. 
ಕಾಡಾನೆ ಸಿದ್ದನ ಚಿಕಿತ್ಸೆಗಾಗಿ ಸರಕಾರ ಸಮಿತಿಯೊಂದನ್ನು ರಚಿಸಿ, ವ್ಯವಸ್ಥೆ ಮಾಡಿತ್ತು. ಅರಣ್ಯ ಇಲಾಖೆಯು ವೈಲ್ಡ್ ಲೈಫ್ ಎಸ್ ಒಎಸ್ ಎಂಬ ಸಂಸ್ಥೆ ಸಹಕಾರದ ಜತೆಗೆ ಸಿದ್ದನ ಚಿಕಿತ್ಸೆ ಬಗ್ಗೆ ನಿಗಾ ವಹಿಸುತ್ತಿತ್ತು. 25-30 ವರ್ಷದ ಕಾಡಾನೆಗೆ  ಗುವಾಹಟಿ ಹಾಗೂ ಕೇರಳದ ವೈದ್ಯರು ಚಿಕಿತ್ಸೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!