ಚಿಕಿತ್ಸೆ ಪಡೆಯುತ್ತಿರುವ ಕಾಡಾನೆ ಸಿದ್ದ 
ರಾಜ್ಯ

ಅನಾರೋಗ್ಯದಿಂದ ನರಳುತ್ತಿದ್ದ ಕಾಡಾನೆ ಸಿದ್ದ ಸಾವು

ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ.

ರಾಮನಗರ: ಕಾಲು ಮುರಿದುಕೊಂಡು ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕಾಡಾನೆ ಸಿದ್ದ ಡಿ.8 ರಂದು ಮೃತಪಟ್ಟಿದೆ. 
ಆಗಸ್ಟ್ ತಿಂಗಳಲ್ಲಿ ಬನ್ನೇರುಘಟ್ಟದಿಂದ ಆಹಾರಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವೇಳೆಯಲ್ಲಿ ಕಾಡಾನೆಯ ಕಲು ಮುರಿದಿತ್ತು. ಕಾಲು ಮುರಿದುಕೊಂಡಿದ್ದ ಕಾಡಾನೆಗೆ ರಾಮನಗರದ ಮಂಚನಬೆಲೆಯ ಬಳಿ ಕಳೆದ 2-3 ತಿಂಗಳುಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ದಿನಗಳ ಕಾಲ ಅನಾರೋಗ್ಯ ಎದುರಿಸಿದ್ದ ಕಾಡಾನೆ ಚೇತರಿಕೆ ಕಾಣುವ ಲಕ್ಷಣಗಳು ಇರಲಿಲ್ಲ. ಆದರೆ ಕಳೆದ ಕೆಲವು ದಿನಗಳ ಹಿಂದೆ ಕಾಡಾನೆ ಸಿದ್ದ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಸಿದ್ದ ಮೃತಪಟ್ಟಿದೆ. 
ಕಾಡಾನೆ ಸಿದ್ದನ ಚಿಕಿತ್ಸೆಗಾಗಿ ಸರಕಾರ ಸಮಿತಿಯೊಂದನ್ನು ರಚಿಸಿ, ವ್ಯವಸ್ಥೆ ಮಾಡಿತ್ತು. ಅರಣ್ಯ ಇಲಾಖೆಯು ವೈಲ್ಡ್ ಲೈಫ್ ಎಸ್ ಒಎಸ್ ಎಂಬ ಸಂಸ್ಥೆ ಸಹಕಾರದ ಜತೆಗೆ ಸಿದ್ದನ ಚಿಕಿತ್ಸೆ ಬಗ್ಗೆ ನಿಗಾ ವಹಿಸುತ್ತಿತ್ತು. 25-30 ವರ್ಷದ ಕಾಡಾನೆಗೆ  ಗುವಾಹಟಿ ಹಾಗೂ ಕೇರಳದ ವೈದ್ಯರು ಚಿಕಿತ್ಸೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT