ಕ್ರೂಸರ್ 
ರಾಜ್ಯ

ಹುಬ್ಬಳ್ಳಿಯಲ್ಲಿ ಕ್ರೂಸರ್-ಲಾರಿ ನಡುವೆ ಭೀಕರ ಅಪಘಾತ: 6 ಸಾವು

ಗದಗ ಜಿಲ್ಲೆಯ ಕೊಣ್ಣುರ್ ಕ್ರಾಸ್ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹುಬ್ಬಳ್ಳಿ ಮಾದಿಗ ಸಮಾವೇಶಕ್ಕೆ ಹೊರಟ್ಟಿದ್ದ 6 ಮಂದಿ ...

ಬಾಗಲಕೋಟೆ: ಗದಗ ಜಿಲ್ಲೆಯ ಕೊಣ್ಣುರ್ ಕ್ರಾಸ್ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹುಬ್ಬಳ್ಳಿ ಮಾದಿಗ ಸಮಾವೇಶಕ್ಕೆ ಹೊರಟ್ಟಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 
ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 9.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಕ್ರೂಸರ್ ನಜ್ಜುಗುಜ್ಜಾಗಿದ್ದು ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದು 8 ಮಂದಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವರಾದ ಬಸವರಾಜ ಮ್ಯಾಗೇರಿ, ಭೀಮಣ್ಣ ಕಳ್ಳಿಮನಿ, ಬಾಬು ಕಲ್ಯಾಣಿ, ಎಸ್ಎಸ್ ಮ್ಯಾಗೇರಿ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರ ತಲಾ 1 ಲಕ್ಷ ರುಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT