ಸಂಗ್ರಹ ಚಿತ್ರ 
ರಾಜ್ಯ

ರಾಸಲೀಲೆ ಆರೋಪ ಸಾಬೀತಾದರೆ ಮೇಟಿ ರಾಜಿನಾಮೆ ಖಂಡಿತ: ಸಿಎಂ ಸಿದ್ದರಾಮಯ್ಯ

ಅಬಕಾರಿ ಸಚಿವ ಎಚ್‌.ವೈ ಮೇಟಿ ಅವರ ವಿರುದ್ಧದ ರಾಸಲೀಲೆ ಪ್ರಕರಣ ಸಾಬೀತಾದರೆ ಅವರು ಖಂಡಿತಾ ರಾಜಿನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಅಬಕಾರಿ ಸಚಿವ ಎಚ್‌.ವೈ ಮೇಟಿ ಅವರ ವಿರುದ್ಧದ ರಾಸಲೀಲೆ ಪ್ರಕರಣ ಸಾಬೀತಾದರೆ ಅವರು ಖಂಡಿತಾ ರಾಜಿನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಕ್ಷ್ಯ ಇರುವ ಸಿಡಿ ಬಿಡುಗಡೆಯಾದರೆ ತಕ್ಷಣವೇ ರಾಜೀನಾಮೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ  ಸಿದ್ದರಾಮಯ್ಯ, ಮೇಟಿಯಷ್ಟೇ ಅಲ್ಲ, ಯಾರೇ ತಪ್ಪು ಮಾಡಿದರೂ ತಪ್ಪೇ. ಇದರಲ್ಲಿ ನಮ್ಮ ನೈತಿಕತೆ ಪ್ರಶ್ನೆಯೂ ಇರುತ್ತದೆ. ಮೇಟಿ ವಿರುದ್ಧ ಕೇಳಿ ಬಂದಿರುವ ಆರೋಪದ ಬಗ್ಗೆ ಸಾಕ್ಷ್ಯ ಇರುವ ಸೀಡಿ ಬಿಡುಗಡೆಯಾದರೆ ತಕ್ಷಣವೇ  ರಾಜೀನಾಮೆ ಪಡೆಯಲಾಗುವುದು. ಅವರ ವಿರುದ್ಧ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಮೀನ-ಮೇಷ ಎಣಿಸುತ್ತಿಲ್ಲ. ಮೇಟಿ ಅವರಿಂದ ಯಾವುದೇ ರೀತಿಯ ವಿವರಣೆಯನ್ನೂ ಕೇಳಿಲ್ಲ. ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ ಎಂದು  ಹೇಳಿದ್ದಾರೆ.

ಇನ್ನು ನಿನ್ನೆ ಈ ಪ್ರಕರಣ ಸಂಬಂಧ ವಿವರ ನೀಡಲು ಸಚಿವ ಎಚ್ ವೈ ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದು, ಈ ವೇಳೆ ಸಿದ್ದರಾಮಯ್ಯ ಅವರು ಖಾರವಾಗಿ ಮಾತನಾಡಿದ್ದಾರೆ ಎಂದು  ತಿಳಿದುಬಂದಿದೆ. ಮೇಟಿ ವಿರುದ್ಧದ ಆರೋಪದಿಂದ ಸರ್ಕಾರಕ್ಕೆ ಮುಜುಗರವಾಗಿದ್ದು, ಆರೋಪ ಸಾಬೀತಾದರೆ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಹೇಳೆ ಅರ್ಧಕ್ಕೆ ದೂರವಾಣಿ ಕರೆಯನ್ನು ಕಟ್ ಮಾಡಿದ್ದಾರೆ ಎಂದು  ತಿಳಿದುಬಂದಿದೆ. ಅಂತೆಯೇ ಪ್ರಕರಣ ಸಂಬಂಧ ರಾಜ್ಯ ಪೊಲೀಸರನ್ನು ಹಾಗೂ ಗುಪ್ತಚರ ಇಲಾಖೆ ಅಧಿಕಾರಿಗಳಿಂದಲೂ ಸಿಎಂ ಸಿದ್ದರಾಮಯ್ಯ ಮಾಹಿತಿ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಆರೋಪ ಸಾಬೀತಾದರೆ ರಾಜಿನಾಮೆ ನೀಡಿ: ಮೇಟಿಗೆ ಪರಮೇಶ್ವರ್ ತಾಕೀತು
ಇನ್ನು ರಾಸಲೀಲೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪ ಸಂಬಂಧ ವಿವರಣೆ ನೀಡಲು ಸಚಿವ ಎಚ್ ವೈ ಮೇಟಿ ಅವರು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿ  ಚರ್ಚಿಸಿದ್ದಾರೆ. ಈ ವೇಳೆ ಪರಮೇಶ್ವರ ಅವರು ಆರೋಪ ಸಾಬೀತಾದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ಆರೋಪ ಮಾಡಿರುವ ಆರ್ ಟಿಐ  ಕಾರ್ಯಕರ್ತ ರಾಜಶೇಖರ್‌ಗೆ ಬಳ್ಳಾರಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಪ್ರಕರಣ ಹಾಗೂ ಸಚಿವರ ವಿರುದ್ಧ ರಾಜಶೇಖರ್ ಮಾಡಿರುವ ಆರೋಪಗಳ ಕುರಿತು ಸ್ಪಷ್ಟೀಕರಣ ನೀಡುವಂತೆ ನೋಟಿಸ್ ನಲ್ಲಿ ಪೊಲೀಸರು  ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel