ಹತ್ಯೆಯಾದ ಯೋಧ ಈರಣ್ಣ ಇಂಡಿ 
ರಾಜ್ಯ

ತಂದೆಯಿಂದಲೇ ಯೋಧನ ಬರ್ಬರ ಹತ್ಯೆ!

ಯೋಧನೊಬ್ಬನನ್ನು ಆತನ ತಂದೆಯೇ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಮಂಗಳವಾರ ಬೈಲಹೊಂಗಲದ ನಯಾ ನಗರದಲ್ಲಿ ನಡೆದಿದೆ...

ಬೆಳಗಾವಿ: ಯೋಧನೊಬ್ಬನನ್ನು ಆತನ ತಂದೆಯೇ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಮಂಗಳವಾರ ಬೈಲಹೊಂಗಲದ ನಯಾ ನಗರದಲ್ಲಿ ನಡೆದಿದೆ.

ಈರಣ್ಣ ಇಂಡಿ (21) ಹತ್ಯೆಯಾದ ಯೋಧ. ಗುಂಡಿನ ದಾಳಿ ವೇಳೆ ಈರಣ್ಣ ಅವರ ತಾಯಿ ಅನುಸೂಯಾ ಹಾಗೂ ಮಗಳು ಪ್ರೀತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಠಲ ಇಂಡಿ (68)  ಗುಂಡು ಹಾರಿಸಿ ಹತ್ಯೆ ಮಾಡಿದ ತಂದೆಯಾಗಿದ್ದಾರೆ. ಹತ್ಯೆಯಾದ ದಿನದಂದು ಈರಣ್ಣ ಇಂಡಿ ಹಾಗೂ ವಿಠಲ ಇಂಡಿ ನಡುವೆ ಹಣದ ವಿಚಾರಕ್ಕೆ ಜಗಳವಾಗಿದೆ. ಇಬ್ಬರ ನಡುವೆ ತೀವ್ರ ವಾಗ್ವಾದಗಳು ನಡೆದಿವೆ. ಈ ವೇಳೆ ಕೆಂಡಾಮಂಡಲವಾದ ವಿಠಲ ಇಂಡಿಯವರು ರಿವಾಲ್ವರ್ ನಿಂದ ಐದು ಗುಂಡುಗಳನ್ನು ಈರಣ್ಣ ಇಂಡಿ ಅವರ ಮೇಲೆ ಹಾರಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ತಾಯಿ ಹಾಗೂ ಮಗಳಿಗೂ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆ ಬಳಿಕ ವಿಠಲ ಇಂಡಿಯವರು ತಲೆ ಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಘಟನೆ ಕುರಿತಂತೆ ಹೇಳಿಕೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ಅವರು,  ವಿಠಲ ಇಂಡಿಯವರು ಇರುವ ಸ್ಥಳವನ್ನು ಈಗಾಗಲೇ ಕಂಡು ಹಿಡಿಯಲಾಗಿದ್ದು, ಶೀಘ್ರದಲ್ಲೇ ಆತನನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT