ಹತ್ಯೆಯಾದ ಯೋಧ ಈರಣ್ಣ ಇಂಡಿ 
ರಾಜ್ಯ

ತಂದೆಯಿಂದಲೇ ಯೋಧನ ಬರ್ಬರ ಹತ್ಯೆ!

ಯೋಧನೊಬ್ಬನನ್ನು ಆತನ ತಂದೆಯೇ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಮಂಗಳವಾರ ಬೈಲಹೊಂಗಲದ ನಯಾ ನಗರದಲ್ಲಿ ನಡೆದಿದೆ...

ಬೆಳಗಾವಿ: ಯೋಧನೊಬ್ಬನನ್ನು ಆತನ ತಂದೆಯೇ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಮಂಗಳವಾರ ಬೈಲಹೊಂಗಲದ ನಯಾ ನಗರದಲ್ಲಿ ನಡೆದಿದೆ.

ಈರಣ್ಣ ಇಂಡಿ (21) ಹತ್ಯೆಯಾದ ಯೋಧ. ಗುಂಡಿನ ದಾಳಿ ವೇಳೆ ಈರಣ್ಣ ಅವರ ತಾಯಿ ಅನುಸೂಯಾ ಹಾಗೂ ಮಗಳು ಪ್ರೀತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಠಲ ಇಂಡಿ (68)  ಗುಂಡು ಹಾರಿಸಿ ಹತ್ಯೆ ಮಾಡಿದ ತಂದೆಯಾಗಿದ್ದಾರೆ. ಹತ್ಯೆಯಾದ ದಿನದಂದು ಈರಣ್ಣ ಇಂಡಿ ಹಾಗೂ ವಿಠಲ ಇಂಡಿ ನಡುವೆ ಹಣದ ವಿಚಾರಕ್ಕೆ ಜಗಳವಾಗಿದೆ. ಇಬ್ಬರ ನಡುವೆ ತೀವ್ರ ವಾಗ್ವಾದಗಳು ನಡೆದಿವೆ. ಈ ವೇಳೆ ಕೆಂಡಾಮಂಡಲವಾದ ವಿಠಲ ಇಂಡಿಯವರು ರಿವಾಲ್ವರ್ ನಿಂದ ಐದು ಗುಂಡುಗಳನ್ನು ಈರಣ್ಣ ಇಂಡಿ ಅವರ ಮೇಲೆ ಹಾರಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ತಾಯಿ ಹಾಗೂ ಮಗಳಿಗೂ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆ ಬಳಿಕ ವಿಠಲ ಇಂಡಿಯವರು ತಲೆ ಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಘಟನೆ ಕುರಿತಂತೆ ಹೇಳಿಕೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇ ಗೌಡ ಅವರು,  ವಿಠಲ ಇಂಡಿಯವರು ಇರುವ ಸ್ಥಳವನ್ನು ಈಗಾಗಲೇ ಕಂಡು ಹಿಡಿಯಲಾಗಿದ್ದು, ಶೀಘ್ರದಲ್ಲೇ ಆತನನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT