ಪ್ರಕಾಶ್ ಜಾವೇಡ್ಕರ್ 
ರಾಜ್ಯ

ರಾಯಚೂರಿನಲ್ಲಿ ಐಐಐಟಿ ಸ್ಥಾಪನೆಗೆ ಕೇಂದ್ರದ ಅಸ್ತು

ರಾಯಚೂರು ಜಿಲ್ಲೆಯಲ್ಲಿ ಐಐಐಟಿ ಸ್ಥಾಪನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಳೆದ ವರ್ಷ ರಾಯಚೂರಿಗೆ ಐಐಟಿ ಕೈ ತಪ್ಪಿತ್ತು. ಹೀಗಾಗಿ ...

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ಐಐಐಟಿ ಸ್ಥಾಪನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಳೆದ ವರ್ಷ ರಾಯಚೂರಿಗೆ ಐಐಟಿ ಕೈ ತಪ್ಪಿತ್ತು. ಹೀಗಾಗಿ ರಾಯಚೂರಿನಲ್ಲಿ  ಐಐಟಿ ಬದಲು ಐಐಐಟಿ (ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇನ್ ಫಾರ್ಮೇಶನ್ ಟೆಕ್ನಾಲಜಿ )  ಸ್ಥಾಪನೆಗೆ ಅವಕಾಶ ನೀಡಿದೆ.

ರಾಯಚೂರಿನಲ್ಲಿ ಐಐಟಿ ಸ್ಥಾಪಿಸುವಂತೆ ನಂಜುಂಡಪ್ಪ ವರದಿ ಶಿಫಾರಸು ಮಾಡಿತ್ತು. ಆದರೆ ಕಳೆದ ವರ್ಷ ಧಾರವಾಡದಲ್ಲಿ ಐಐಟಿ ಸ್ಥಾಪನೆಗೆ ಕೇಂದ್ರ ಅನುಮತಿ ನೀಡಿತು. ಐಐಟಿ ಸ್ಥಾಪನೆ ಅವಕಾಶ ಕೈತಪ್ಪಿದ್ದಕ್ಕಾಗಿ ರಾಯಚೂರಿನಲ್ಲಿ ತೀವ್ರ ಅಸಮಾಧಾನ, ಪ್ರತಿಭಟನೆ, ಬಂದ್ ನಡೆಸಲಾಗಿತ್ತು.

ಕಳೆದ ವರ್ಷ ರಾಯಚೂರು ಜಿಲ್ಲೆಗೆ ಐಐಟಿ ಕೈತಪ್ಪಿದ್ದಕ್ಕಾಗಿ ಮುಂದಿನ ವರ್ಷ(2016) ಐಐಐಟಿ ಸ್ಥಾಪಿಸುವಂತೆ ನಿಯೋಗವೊಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT