ಎನ್.ಎಸ್ ಮೆಘರಿಕ್ 
ರಾಜ್ಯ

ಬೆಂಗಳೂರು: ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ 8 ಪೊಲೀಸ್ ಸಿಬ್ಬಂದಿ ವಜಾ

ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಸಬ್ ಇನ್ಸ್ ಪೆಕ್ಟರ್ ಸೇರಿ ಒಟ್ಟು ಮಂದಿ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ನಗರ ಪೊಲೀಸ್ ...

ಬೆಂಗಳೂರು:  ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಸಬ್ ಇನ್ಸ್ ಪೆಕ್ಟರ್ ಸೇರಿ ಒಟ್ಟು ಮಂದಿ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಿ ನಗರ ಪೊಲೀಸ್ ಆಯುಕ್ತ. ಎನ್.ಎಸ್ ಮೆಘರಿಕ್ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ನಡೆದಿರುವ ಬ್ಲ್ಯಾಕ್ ಅಂಡ್‌ ವೈಟ್ ದಂಧೆ ಹಾಗೂ ದರೋಡೆ ಪ್ರಕರಣಗಳ ಸಂಬಂಧ ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಕಲಾಸಿಪಾಳ್ಯ ಪೊಲೀಸ್‌‌ ಠಾಣೆ PSI ಮಲ್ಲಿಕಾರ್ಜುನ್, ಪೇದೆಗಳಾದ ಮಂಜುನಾಥ್ ಮಗೊದ್, ಚಂದ್ರಶೇಖರ್‌, ಎಲ್‌‌.ಕೆ.ಗಿರೀಶ್‌‌, ಅನಂತರಾಜು, ಸಿಸಿಬಿ ಪೇದೆ ಶೇಷಾ ಸೇರಿ 7 ಪೊಲೀಸರು ಸೇವೆಯಿಂದ ವಜಾಗೊಂಡಿದ್ದಾರೆ.

ಗಿರಿನಗರ ಪೊಲೀಸ್‌‌‌ ಠಾಣೆ ಪೇದೆಗಳಾದ ಗಿರೀಶ್‌‌, ಮಯೂರ  8 ಲಕ್ಷ ನಗದು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ಕಾಮಾಕ್ಷಿಪಾಳ್ಯ ಪೊಲೀಸರು 35 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಗಿರಿನಗರದ ಇಬ್ಬರು ಪೇದೆಗಳು ಎಂಟು ಲಕ್ಷ ದರೋಡೆ ಕೇಸ್‌‌‌‌ನಲ್ಲಿ ಭಾಗಿಯಾಗಿದ್ದರು. ಇನ್ನು ಸಿಸಿಬಿ ಪೇದೆ ಶೇಷ 22.3 ಲಕ್ಷ ಡಕಾಯತಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಇತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT