ಐಟಿ ದಾಳಿ ವೇಳೆ ಪತ್ತೆಯಾದ ನಗದು - ಎಸ್ ಸಿ ಜಯಚಂದ್ರ 
ರಾಜ್ಯ

ಭ್ರಷ್ಟಾಚಾರ ಪ್ರಕರಣ: ಎಸ್ ಸಿ ಜಯಚಂದ್ರಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಭಾರೀ ಪ್ರಮಾಣ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಿರುವ ರಾಜ್ಯ ಹೆದ್ದಾರಿ ಮುಖ್ಯ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರಗೆ ಗುರುವಾರ ಸಿಟಿ ಸಿವಿಲ್ ಕೋರ್ಟ್ ...

ಬೆಂಗಳೂರು: ಭಾರೀ ಪ್ರಮಾಣ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಿರುವ ರಾಜ್ಯ ಹೆದ್ದಾರಿ ಮುಖ್ಯ ಯೋಜನಾಧಿಕಾರಿ ಎಸ್.ಸಿ.ಜಯಚಂದ್ರಗೆ ಗುರುವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಷರತ್ತುಗಳನ್ನು ಪೂರ್ಣಗೊಳಿಸದ ಕಾರಣ ಅವರನ್ನು ಒಂದು ದಿನದ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಎಸ್‌.ಸಿ. ಜಯಚಂದ್ರ ವಿರುದ್ಧ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಎಸಿಬಿ ತನಿಖಾ ಸಂಸ್ಥೆಗಳು ಪ್ರಕರಣ ದಾಖಲಿಸಿದ್ದವು. ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಇಂದು ಸಿಬಿಐನ ವಿಶೇಷ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತು. ನಾಳೆ ಷರತ್ತುಗಳನ್ನು ಪೂರೈಸಿ ಜಾಮೀನು ಪಡೆದರೆ, ಅವರನ್ನು ಸಿಬಿಐ ಬಂಧಿಸಲಿದೆ ಎಂದು ಮೂಲಗಳು ತಿಳಿಸಿವೆ.

ಜಯಚಂದ್ರ ಅವರಿಗೆ ಜಾಮೀನು ದೊರೆತ ಬಳಿಕ, ಷರತ್ತಿನ ಅನ್ವಯ ಪಾಸ್‌ಪೋರ್ಟ್ಅನ್ನು ನ್ಯಾಯಾಲಯದ ವಶಕ್ಕೆ ನೀಡಲು ವಿಫಲರಾದ ಕಾರಣ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಯಿತು. ಜಯಚಂದ್ರಗೆ ಜಾಮೀನು ದೊರೆತರೂ ಬಿಡುಗಡೆಯಾಗಲಿಲ್ಲ. ಇನ್ನು ಎಸಿಬಿ ಕೂಡ ಜಯಚಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ.

ಜಯಚಂದ್ರ ಮನೆ ಮೇಲೆ ಸಿಬಿಐ, ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾಗ ಕೋಟಿ, ಕೋಟಿ ಹೊಸ ನೋಟು, ಚಿನ್ನದ ಗಟ್ಟಿ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT