ಸಂಗ್ರಹ ಚಿತ್ರ 
ರಾಜ್ಯ

ಮೇಟಿ ಲೈಂಗಿಕ ಹಗರಣ: ಪೇದೆ ಸುಭಾಷ್ ಸೇರಿ ನಾಲ್ವರ ವಿರುದ್ಧ ವಿಜಯಲಕ್ಷ್ಮಿ ದೂರು!

ಮೇಟಿ ಲೈಂಗಿಕ ಹಗರಣ ಸಂಬಂಧ ಸುದ್ದಿಯಾಗಿದ್ದ ಮಹಿಳೆ ವಿಜಯಲಕ್ಷ್ಮಿ ಸರೂರು ಅವರು ಕಾನ್ ಸ್ಟೆಬಲ್‌ ಸುಭಾಷ್‌ ಮುಗಳಖೋಡ ಸೇರಿ ನಾಲ್ಕು ಮಂದಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಬಾಗಲಕೋಟೆ: ಮೇಟಿ ಲೈಂಗಿಕ ಹಗರಣ ಸಂಬಂಧ ಸುದ್ದಿಯಾಗಿದ್ದ ಮಹಿಳೆ ವಿಜಯಲಕ್ಷ್ಮಿ ಸರೂರು ಅವರು ಕಾನ್ ಸ್ಟೆಬಲ್‌ ಸುಭಾಷ್‌ ಮುಗಳಖೋಡ ಸೇರಿ ನಾಲ್ಕು ಮಂದಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ ವಿಜಯಲಕ್ಷ್ಮಿ ಅವರು, ಡಿಎಆರ್ ಕಾನ್ಸ್ ಟೇಬಲ್ ಸುಭಾಷ್ ಮುಗಳಖೋಡ, ಸಿದ್ದಲಿಂಗ ಅಬಲಗಟ್ಟಿ, ಮಾರುತಿ ಮೀರಜ್ ಕರ್ ಮತ್ತು ಅಶೋಕ್ ಲಾಗಲೋಟಿ ಎಂಬುವವರ ವಿರುದ್ಧ ಶನಿವಾರ ಮಧ್ಯರಾತ್ರಿ  ವಿಜಯಲಕ್ಷ್ನಿ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಲೈಂಗಿಕ ಹಗರಣ ಸಂಬಂಧ ತಮ್ಮ ಹಿಂದೆ ಬಿದ್ದಿರುವ ಮಾಧ್ಯಮಗಳ ಕಣ್ಣುತಪ್ಪಿಸಲು ವಿಜಯಲಕ್ಷ್ನಿ ಅವರು ತಡರಾತ್ರಿ ದೂರು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶನಿವಾರ ರಾತ್ರಿ ಬಾಗಲಕೋಟೆಯ ನವನಗರ ಠಾಣೆಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಜೀವ ಬೆದರಿಕೆ ಆರೋಪದಲ್ಲಿ ಡಿಎಆರ್‌ ಪೇದೆ ಸುಭಾಷ್‌ ಮುಗಳಖೋಡ ಸೇರಿದಂತೆ ನಾಲ್ಕು ಮಂದಿ ವಿರುದ್ಧ ದೂರುದಾಖಲಿಸಿದ್ದಾರೆ.  ದೂರು ದಾಖಲಿಸಿಕೊಂಡಿರುವ ಪೊಲೀಸರು ಐಪಿಸಿ ಸೆಕ್ಷನ್‌ 307 (ಹತ್ಯಾ ಪ್ರಯತ್ನ), 356 (ಹಲ್ಲೆ), 354 ಬಿ (ಮಹಿಳೆ ಮೇಲೆ ದೌರ್ಜನ್ಯ),109,143, 504,  ಹಾಗೂ120ಬಿ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ  ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT