ಸಾಂದರ್ಭಿಕ ಚಿತ್ರ 
ರಾಜ್ಯ

ಆಪರೇಶನ್ ಜಂಬೂ ಕಾರ್ಯಾಚರಣೆ ಆರಂಭ: ನೆಲಮಂಗಲ, ಮಾಗಡಿ ಸುತ್ತಮುತ್ತ ಬೀಡುಬಿಟ್ಟಿರುವ ಅರಣ್ಯ ಇಲಾಖೆ ಸಿಬ್ಬಂದಿ

ಆಪರೇಶನ್ ಎಲಿಫೆಂಟ್ ಕ್ಯಾಪ್ಚರ್ ನಿನ್ನೆ ಆರಂಭಗೊಂಡಿದ್ದು ನೆಲಮಂಗಲ ಮತ್ತು ಮಾಗಡಿ ಅರಣ್ಯ...

ಬೆಂಗಳೂರು: ಆಪರೇಶನ್ ಎಲಿಫೆಂಟ್ ಕ್ಯಾಪ್ಚರ್ ನಿನ್ನೆ ಆರಂಭಗೊಂಡಿದ್ದು ನೆಲಮಂಗಲ ಮತ್ತು ಮಾಗಡಿ ಅರಣ್ಯ ಪ್ರದೇಶಗಳ ಸುತ್ತಮುತ್ತ 100 ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ಮಾನವ, ಆನೆಗಳ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿದ್ದಂತೆ ನಾಡಿಗೆ ಬರಲಾರಂಭಿಸಿರುವ ಆನೆಗಳನ್ನು ಹಿಡಿಯುವ ಕಾರ್ಯಾಚರಣೆಗೆ ಇಲಾಖೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಣ್ಯ ವಲಯಗಳಲ್ಲಿ ಮತ್ತು ಮಾಗಡಿ ಅರಣ್ಯದ ಸುತ್ತಮುತ್ತ ಆನೆಗಳು ತಿರುಗಾಡುತ್ತಿವೆ ಎನ್ನುತ್ತಾರೆ ಸಿಬ್ಬಂದಿ.
ಮೈಸೂರು ದಸರಾ ಆನೆಗಳನ್ನು ಪಳಗಿಸುವವರು ಇಲ್ಲಿನ ಆನೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗೆ ನೆರವಾಗುತ್ತಿದ್ದಾರೆ. ಇಬ್ಬರ ಸಾವಿಗೆ ಕಾರಣವಾದ ಬಲಿಷ್ಟ ದಂತಗಳನ್ನು ಹೊಂದಿರುವ ಆನೆಗಳನ್ನು ಹಿಡಿಯುವ ಕಾರ್ಯಾಚರಣೆ ಕೂಡ ನಡೆಯುತ್ತಿದೆ.
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ ರಾಮನಗರದ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಮಂಜುನಾಥ್, ಆನೆಗಳನ್ನು ಗುರುತು ಹಿಡಿಯಲಾಗಿದ್ದು ಕಾರ್ಯಾಚರಣೆ ನಿನ್ನೆ ಬೆಳಗ್ಗೆ 7 ಗಂಟೆಗೆ ನೆಲಮಂಗಲ ಸುತ್ತಮುತ್ತ ಅರಣ್ಯ ಪ್ರದೇಶದಲ್ಲಿ ಆರಂಭವಾಗಿದೆ. ಯಾವಾಗ ಆನೆಗಳನ್ನು ಹಿಡಿಯುತ್ತಾರೆ ಎಂದು ಹೇಳುವುದು ಕಷ್ಟ ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT