ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೌಢ್ಯ ತೊರೆಯುವವರೆಗೂ ಸಮಾಜ ಅಭಿವೃಧ್ದಿಯಾಗದು: ಸಿದ್ದರಾಮಯ್ಯ

ಜನರು ತಮ್ಮ ಮೌಢ್ಯಾಚರಣೆಯನ್ನು ನಿಲ್ಲಿಸದ ಹೊರತು ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

ಬೆಂಗಳೂರು: ಜನರು ತಮ್ಮ ಮೌಢ್ಯಾಚರಣೆಯನ್ನು ನಿಲ್ಲಿಸದ ಹೊರತು ಸಮಾಜ ಅಭಿವೃದ್ಧಿಗೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನರನ್ನು ಶೋಷಣೆ ಮಾಡುವ ಉದ್ದೇಶದಿಂದ ಪಟ್ಟಭದ್ರ ಹಿತಾಸಕ್ತಿಗಳು ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ರೂಪಿಸುವುದನ್ನು ವಿರೋಧಿಸುತ್ತಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕ್ರೈಸ್ಟ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಗರದಲ್ಲಿ ಮಂಗಳವಾರ ನಡೆದ ಅಕಾಡೆಮಿಯ 9ನೇ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಜನ ಶನಿ ಕಾಟ, ಗುರು ಬಲ ಎಂಬ ಮೌಢ್ಯದ ಆಚರಣೆ ಮಾಡಬಾರದು. ಶನಿ, ಗುರು ಗ್ರಹಗಳಲ್ಲಿರುವುದು ಬೂದಿ ಮಾತ್ರ, ಅವುಗಳನ್ನು ಪೂಜೆ ಮಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಕೆಲ ವಿದ್ಯುನ್ಮಾನ ಸುದ್ದಿ ವಾಹಿನಿಗಳು ಬೆಳಿಗ್ಗೆ ಪ್ರಸಾರಿಸುವ ಜ್ಯೋತಿಷ್ಯ ಕಾರ್ಯಕ್ರಮ, ನೋಡಿದ ಜನ ಅದೃಷ್ಟದ ಹರಳಿನ ಉಂಗುರ ಧರಿಸಿದರೇ ಒಳ್ಳೆಯದಾಗುತ್ತದೆ ಎಂಬು ನಂಬುತ್ತಾರೆ, ಇಂಥ ಮೌಢ್ಯಗಳಿಗೆ ಉತ್ತೇಜನ ನೀಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಅಕಾಡೆಮಿ ಅಧ್ಯಕ್ಷ ಪ್ರೊ. ಯು.ಆರ್‌. ರಾವ್‌ ಮಾತನಾಡಿ, ‘ಜೋತಿಷ್ಯ ಕಾರ್ಯಕ್ರಮ, ಮಂತ್ರ–ಯಂತ್ರಗಳ ಮಾರಾಟದ ಜಾಹೀರಾತುಗಳಿಂದ ಟಿ.ವಿ. ವಾಹಿನಿಗಳು ಮೂಢನಂಬಿಕೆ ಬಿತ್ತುತ್ತಿವೆ. ಅದರ ಬದಲಾಗಿ ದಿನಕ್ಕೆ 2 ಗಂಟೆ ಶೈಕ್ಷಣಿಕ ಕಾರ್ಯಕ್ರಮ ಪ್ರಸಾರ ಮಾಡಿ, ಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು’ ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT