ಆಂಜನೇಯ 
ರಾಜ್ಯ

ಎಸ್ ಎಸ್ಸಿ, ಎಸ್ಟಿ ಗ್ರಾಮಗಳ ಅಭಿವೃದ್ಧಿಗೆ ತಲಾ 1 ಕೋಟಿ ರು ಅನುದಾನ: ಆಂಜನೇಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅತಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ 150 ಕೋಟಿ ರೂ.ಗಳ ವೆಚ್ಚದಲ್ಲಿ ''ಮುಖ್ಯಮಂತ್ರಿ ಆದರ್ಶ ...

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅತಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ 150 ಕೋಟಿ ರೂ.ಗಳ ವೆಚ್ಚದಲ್ಲಿ ''ಮುಖ್ಯಮಂತ್ರಿ ಆದರ್ಶ ಗ್ರಾಮ'' ಎಂಬ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಅವರು ಹೇಳಿದ್ದಾರೆ.

ಪರಿಶಿಷ್ಟ ಜಾತಿಯ 100 ಹಾಗೂ ಪರಿಶಿಷ್ಟ ಪಂಗಡದ 50 ಗ್ರಾಮಗಳನ್ನು ಈ ಯೋಜನೆಗೆ ಆಯ್ಕೆ ಮಾಡಿ ತಲಾ ಒಂದು ಕೋಟಿ ರೂ.ವೆಚ್ಚದಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪ ಯೋಜನೆಯಡಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಈ ಯೋಜನೆ ರೂಪಿಸಿ ಜಾರಿಗೊಳಿಸಲಾಗುತ್ತದೆ. ರಸ್ತೆ, ಒಳಚರಂಡಿ, ವಿದ್ಯುತ್‌, ಸಮುದಾಯ ಭವನ, ಶಾಲಾ ಕಟ್ಟಡದ ರಿಪೇರಿ ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ಕೇಂದ್ರ ಸರಕಾರವು 40 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದು ಈ ಯೋಜನೆಗೆ ರಾಜ್ಯ ಸರಕಾರವೂ 40 ಕೋಟಿ ರೂ. ಅನುದಾನ ನೀಡಲಿದೆ. ಕೇಂದ್ರ ಸರಕಾರ ಪ್ರತಿ ಗ್ರಾಮಕ್ಕೆ 20 ಲಕ್ಷ ರೂ.ನೀಡಿದರೆ ರಾಜ್ಯ ಸರಕಾರವೂ 20 ಲಕ್ಷ ನೀಡಲಿದೆ. ಈ ಯೋಜನೆಗೆ ಆಯ್ಕೆಯಾದ ಹಳ್ಳಿಗೆ ಒಟ್ಟು 40 ಲಕ್ಷ ರೂ ಲಭ್ಯವಾಗಲಿದೆ. ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ ಹಾಗೂ ಕಲಬುರ್ಗಿ ಜಿಲ್ಲೆಗಳ 200 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ,  ಎಂದು ಸಚಿವ ಆಂಜನೇಯ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT