ರಾಜ್ಯ

ಫೇಸ್ ಬುಕ್ ನಲ್ಲಿ ಉಗ್ರಪ್ಪ ವಿರುದ್ಧ ಆಕ್ಷೇಪಾರ್ಹ ಬರಹ: ಇಬ್ಬರ ಬಂಧನ

Shilpa D

ಬೆಂಗಳೂರು:ಎಂ ಎಲ್ ಸಿ,  ವಿ.ಎಸ್‌.ಉಗ್ರಪ್ಪ ಅವರನ್ನು ಆಕ್ಷೇಪಾರ್ಹ ಬರಹಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪದಡಿ ಪ್ರಾಧ್ಯಾಪಕ ಸೇರಿದಂತೆ ಇಬ್ಬರನ್ನು ವಿಧಾನಸೌಧ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದಾವಣಗೆರೆಪ್ರಥಮದರ್ಜೆ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದ ಪ್ರದೀಪ್‌ಕುಮಾರ್‌ ಹಾಗೂ ಶಿವಮೊಗ್ಗದಲ್ಲಿ ಯುಪಿಎಸ್‌ ವ್ಯಾಪಾರ ಮಾಡುವ ಅರುಣ್‌ಕುಮಾರ್‌ ಬಂಧಿತರು.  ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಕೆಲ ದಿನಗಳವರೆಗೆ ವಶಕ್ಕೆ ನೀಡುವಂತೆ ಮನವಿ ಮಾಡುತ್ತೇವೆ ಎಂದು ವಿಧಾನಸೌಧ ಪೊಲೀಸರು ಹೇಳಿದ್ದಾರೆ,

ರಾಮಚಂದ್ರಾಪುರ ಮಠದ ಭಕ್ತರಾಗಿರುವ ಇವರು ಸ್ವಚ್ಛ ಬ್ರಾಹ್ಮಣ ವೇದಿಕೆ’ ಗ್ರೂಪ್‌ ಸದಸ್ಯರಾಗಿರುವ ಇವರು  ಉಗ್ರಪ್ಪ ಅವರ ವಿರುದ್ಧ ಅಸಭ್ಯ ಮತ್ತು ಆಕ್ಷೇಪಾರ್ಹ ಬರಹ ಪ್ರಕಟಿಸಿ, ಕೊಲೆ ಬೆದರಿಕೆ ಹಾಕಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

SCROLL FOR NEXT