ನಟ ಚೇತನ್ 
ರಾಜ್ಯ

ಬುಡಕಟ್ಟು ಜನಾಂಗದವರಿಗೆ ಸರ್ಕಾರದ ಬೆಂಬಲವಿಲ್ಲ: ನಟ ಚೇತನ್

ಮಡಿಕೇರಿಯ ದಿಡ್ಡಳ್ಳಿಯಲ್ಲಿ ಬುಡಕಟ್ಟು ಜನಾಂಗದವರನ್ನು ಉಚ್ಛಾಟಿಸಿರುವುದನ್ನು ಮುಖ್ಯಮಂತ್ರಿ...

ಮಂಗಳೂರು: ಮಡಿಕೇರಿಯ ದಿಡ್ಡಳ್ಳಿಯಲ್ಲಿ ಬುಡಕಟ್ಟು ಜನಾಂಗದವರನ್ನು ಉಚ್ಛಾಟಿಸಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧಿಸಲಿಲ್ಲ ಎಂದು ಕನ್ನಡ ಚಿತ್ರ ನಟ ಚೇತನ್ ಆರೋಪಿಸಿದ್ದಾರೆ.
ನಿನ್ನೆ ಮಂಗಳೂರು ಸಮೀಪ ಬಿಜ್ಜೋಡಿಯಲ್ಲಿ ಮಾತನಾಡಿದ ಅವರು,  ನಿಷೇಧಾತ್ಮಕ ಆದೇಶ ವಿಧಿಸುವ ಮೂಲಕ ರಾಜ್ಯ ಸರ್ಕಾರ ಪ್ರತಿಭಟನಾಕಾರರ ಪ್ರಯತ್ನಗಳನ್ನು ತಡೆಹಿಡಿಯುತ್ತಿದೆ ಎಂದು ಆರೋಪಿಸಿದರು.
ಬುಡಕಟ್ಟು ಜನಾಂಗದವರ ಪ್ರತಿಭಟನೆ ಸಾಂವಿಧಾನಿಕ ಹಕ್ಕುಗಳನ್ನು ಎಂದಿಗೂ ಮೀರಿ ಹೋಗಿಲ್ಲ. ಸರ್ಕಾರದ ಎಲ್ಲಾ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಬುಡಕಟ್ಟು ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ನಿಷೇಧ ಆದೇಶವನ್ನು ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದರು.
ಮಾನವೀಯತೆಯಿಲ್ಲದೆ ಬದುಕುವುದರಲ್ಲಿ ಯಾವುದೇ ಅರ್ಥವಿಲ್ಲ. ಕೆಳಮಟ್ಟದಲ್ಲಿರುವ ಬುಡಕಟ್ಟು ಜನಾಂಗದವರಿಗೆ ನ್ಯಾಯ ಸಿಗಬೇಕಿದೆ. ತುಳಿತಕ್ಕೊಳಗಾಗಿರುವ ಸಮುದಾಯದ ಮತ್ತು ಬುಡಕಟ್ಟು ಜನಾಂಗದವರ ಅಭಿವೃದ್ಧಿ ಸರ್ಕಾರದ ಮುಖ್ಯ ಅಜೆಂಡವಾಗಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT