ಶೂ ಹಾಕಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೈಸೂರು: ಆಪ್ತ ಸಹಾಯಕನ ಕೈಯ್ಯಿಂದ ಶೂ ಹಾಕಿಸಿಕೊಂಡ ಸಿಎಂ ಸಿದ್ದರಾಮಯ್ಯ

ಎಲ್ಲರೂ ಸಮಾನರು ಎಂದು ಸದಾ ಹೇಳುವ ಸಮಾಜವಾದಿ ಸಿದ್ದರಾಮಯ್ಯ ತಮ್ಮ ಆಪ್ತ ಸಹಾಯಕನ ಕೈಯ್ಯಿಂದ ಶೂ ಹಾಕಿಸಿಕೊಂಡಿರುವುದು ಎಲ್ಲೆಡೆ ತೀವ್ರ ...

ಮೈಸೂರು: ಎಲ್ಲರೂ ಸಮಾನರು ಎಂದು ಸದಾ ಹೇಳುವ ಸಮಾಜವಾದಿ ಸಿದ್ದರಾಮಯ್ಯ ತಮ್ಮ ಆಪ್ತ ಸಹಾಯಕನ ಕೈಯ್ಯಿಂದ ಶೂ ಹಾಕಿಸಿಕೊಂಡಿರುವುದು ಎಲ್ಲೆಡೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಮೈಸೂರಿನಲ್ಲಿ ಹಿರಿಯ ನಟ ಚೇತನ್‌ ರಾಮ್‌ ರಾವ್‌ ನಿಧನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮೃತರ ಅಂತಿಮ ದರ್ಶನ ಪಡೆಯಲು ರಾಮ್‌ರಾವ್‌ ಅವರ ಮನೆಗೆ ತೆರಳಿದ್ದರು.ರಾಮ್‌ರಾವ್‌ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮನೆಯಿಂದ ಹೊರಬಂದ ಸಿದ್ದರಾಮಯ್ಯ, ಹೊರಗೆ ಬಿಟ್ಟಿದ್ದ ಶೂ ಅನ್ನು ತಮ್ಮ ಆಪ್ತ ಸಹಾಯಕ ಕುಮಾರ್‌ ಅವರಿಂದ ಸಾರ್ವಜನಿಕರ ಎದುರಲ್ಲೇ ಹಾಕಿಸಿಕೊಂಡರು. ಆತ ಎಲ್ಲರ ಎದುರು ಶೂ ಹಾಕುತ್ತಿದ್ದರು ಸಿಎಂ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನೆ ನಿಂತಿದ್ದರು.

ಸಿಎಂ ಯಾವತ್ತೂ ಈ ರೀತಿ ಮಾಡಿರಲಿಲ್ಲ, ಆದರೆ ಸಾರ್ವಜನಿಕವಾಗಿ ಸಿಎಂ ಶೂ ಹಾಕಿಸಿಕೊಂಡಿದ್ದು ಸರಿಯಾಗಿ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ. ದುಬಾರಿ ಬೆಲೆಯ ಹ್ಯೂಬ್ಲಾಟ್ ವಾಚ್ ಪ್ರಕರಣದ ನಂತರ ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದದ ಮತ್ತೊಂದು ಮುಖ ಅನಾವರಣಗೊಂಡಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಇನ್ನೂ  ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಕಚೇರಿ, ಸಿದ್ದರಾಮಯ್ಯ ಅವರಿಗೆ ಶೂ ಹಾಕಿದ್ದು, ಸರ್ಕಾರಿ ಅಧಿಕಾರಿ ಅಲ್ಲ, ಸಿದ್ದರಾಮಯ್ಯ ಅವರ ಸಂಬಂಧಿ ಕುಮಾರ್ ಎಂಬುವರು ಶೂ ಹಾಕಿದ್ದು ಎಂದು ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

New Year 2026: ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ: ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ, ಸದ್ದಾಂ ಹುಸೇನ್ ಅವಿತುಕೊಂಡ'

ವೈಕುಂಠ ಏಕಾದಶಿ ಯಾವಾಗ: ವ್ರತ ಮಹಿಮೆ ಏನು; ಏಕಾದಶಿಯಂದೇ ವೈಕುಂಠ ದ್ವಾರ ತೆರೆಯುವುದೇಕೆ?

ರೋಹಿಣಿ ನಕ್ಷತ್ರದವರಿಗೆ ಕೃಷ್ಣನಂತೆ ಅನೇಕ ಪತ್ನಿಯರು ಇರ್ತಾರಾ: ಪುನರ್ವಸು ನಕ್ಷತ್ರದಲ್ಲಿ ಜನಿಸಿದರೆ ರಾಮನಂತೆ ವನವಾಸವೇ?

ಚಿತ್ರದುರ್ಗ ಬಸ್ ದುರಂತ: DNA ವರದಿ ಆಧರಿಸಿ ಕುಟುಂಬಗಳಿಗೆ ಮೃತದೇಹ ಹಸ್ತಾಂತರ

SCROLL FOR NEXT