ಮಹೇಶ್ ಜೋಶಿ 
ರಾಜ್ಯ

ದೂರದರ್ಶನ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿಗೆ ರು.2.50 ಲಕ್ಷ ಪರಿಹಾರಕ್ಕೆ ಕೋರ್ಟ್ ಆದೇಶ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೂರದರ್ಶನದ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಸಿಬಿಐ ...

ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೂರದರ್ಶನದ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.

ಸಿಬಿಐ ಎಸ್ ಪಿ ಆಗಿದ್ದ  ಎನ್ ದಿಲೀಪ್ ಕುಮಾರ್ ಮತ್ತು ಇನ್ಸ್ ಪೆಕ್ಟರ್ ಪನ್ನೀರ್ ಸೆಲ್ವಂ ರು.2.50 ಲಕ್ಷ ಪರಿಹಾರ ನೀಡುವಂತೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಈ ಇಬ್ಬರು ಅಧಿಕಾರಿಗಳು ಸುಳ್ಳು ಅಧಿಕಾರಿಗಳು ಸುಳ್ಳು ಮೊಕದ್ದಮೆಯಲ್ಲಿ  ಸಿಲುಕಿಸಲು ಉದ್ದೇಶಿಸಿದ್ದರು ಎಂದು ಆರೋಪಿಸಿ ಜೋಶಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 13 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ  ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು ದೂರದರ್ಶನ ಕಾರ್ಯಕಾರಿ ನಿರ್ಮಾಪಕರಾಗಿದ್ದ ಮಹೇಶ್ ಜೋಶಿ ನಿಗದಿತ ದರಕ್ಕಿಂತ ಕಡಿಮೆ ದರದಲ್ಲಿ ಪ್ರಾಯೋಜಿತ ಕಾರ್ಯಕ್ರಮದ ಪ್ರಸಾರಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಆದರೆ ಸಿಬಿಐ ಪ್ರಕರಣ ದಾಖಲಿಸಿದ್ದ ಕಾರ್ಯಕ್ರಮಕ್ಕೆ ಅನುಮತಿ ನೀಡಿದಾಗ ಜೋಶಿ ಎರವಲು ಸೇವೆಯಲ್ಲಿ ಇದ್ದರು. ತಮ್ಮ ವಿರುದ್ದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ವಿರುದ್ಧ  ಹೈಕೋರ್ಟ್ ದೆ ಜೋಶಿ ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT