ಹೈಕೋರ್ಟ್ 
ರಾಜ್ಯ

ಸಿಗರೇಟ್ ಪ್ಯಾಕ್ ಮೇಲೆ ಎಚ್ಚರಿಕೆ ಚಿತ್ರ: ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಸಿಗರೇಟ್ ಹಾಗೂ ಬೀಡಿ ಎರಡು ಬದಿಯಲ್ಲಿ ಶೇ.85 ಎಚ್ಚರಿಕೆ ಸಂದೇಶ ಪ್ರಕಟಿಸುವುದಕ್ಕೆ ಹೇರಲಾಗಿದ್ದ ಮಧ್ಯಂತರ...

ಬೆಂಗಳೂರು: ಸಿಗರೇಟ್ ಹಾಗೂ ಬೀಡಿ ಎರಡು ಬದಿಯಲ್ಲಿ ಶೇ.85 ಎಚ್ಚರಿಕೆ ಸಂದೇಶ ಪ್ರಕಟಿಸುವುದಕ್ಕೆ ಹೇರಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. 
2014 ಅಕ್ಟೋಬರ್ 15ರಂದು ಕೇಂದ್ರ ಸರ್ಕಾರ ಸಿಗರೇಟ್ ಮತ್ತು ಬೀಡಿ ಪ್ಯಾಕ್ ಮೇಲೆ ಎರಡೂ ಬದಿ ಶೇ.85 ಚಿತ್ರ ಸಹಿತ ಎಚ್ಚರಿಕೆ ಸಂದೇಶ ಪ್ರಕಟಿಸಲು ಆದೇಶಿಸಿತ್ತು. ಆದರೆ ಕೇಂದ್ರ ಸರ್ಕಾರ ಆದೇಶಕ್ಕೆ ಡಿಸೆಬಂರ್ 4ರಂದು ಮಧ್ಯಂತರ ತಡೆಯಾಜ್ಞೆ ನೀಡಲಾಗಿತ್ತು. ಮಧ್ಯಂತರ ಆದೇಶ ತೆರವಿಗೆ ಕೇಂದ್ರ ಸರ್ಕಾರವು ಫೆಬ್ರವರಿಯಲ್ಲಿ ಅರ್ಜಿ ಸಲ್ಲಿಸಿತ್ತು. 
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಸಿಗರೇಟ್- ಬೀಡಿ ಪ್ಯಾಕ್ ಮೇಲೆ ಶೆ.85ರಷ್ಟು ಎಚ್ಚರಿಕೆ ಸಂದೇಶ ಪ್ರಕಟಣೆಗೆ ಹೇರಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.
ಪ್ಯಾಕ್ ಮೇಲೆ ಶೇ.85ರಷ್ಟು ಎಚ್ಚರಿಕೆ ಸಂದೇಶ ಪ್ರಕಟಿಸುವುದರಿಂದ ಉದ್ಯಮದ ಮೇಲೆ ಪರಿಣಾಮ ಬೀರುತ್ತದೆ ಎಂದು ಉತ್ಪಾದಕರ ವಾದವಾಗಿತ್ತು.
ಆದರೆ ಕೇಂದ್ರ ಸರ್ಕಾರ, ವಿಶ್ವದಲ್ಲೇ ಅತಿ ಹೆಚ್ಚು ತಂಬಾಕು ಸೇವಿಸುವ ದೇಶದಲ್ಲಿ ಭಾರತವೂ ಒಂದಾಗಿದೆ. ಪ್ರತಿ ವರ್ಷ ಕ್ಯಾನ್ಸರ್ ಪೀಡಿತರು ಹೆಚ್ಚಾಗುತ್ತಿದ್ದು, ಅನುದಾನ ನೀಡುವುದೇ ಸರ್ಕಾರಕ್ಕೆ ಸವಾಲಾಗಿದೆ. ಸಿಗರೇಟ್ ಬೀಡಿಯಲ್ಲಿ 69 ರಾಸಾಯನಿಕಗಳಿವೆ. ಇದರಿಂದ ಕ್ಯಾನ್ಸರ್ ರೋಗಗಳು ಬರುತ್ತಿವೆ. ಹಾಗಾಗಿ, ಪ್ಯಾಕ್ ಮೇಲೆ ಶೇ.85ರಷ್ಟು ಎಚ್ಚರಿಕೆ ಚಿತ್ರ ಸಂದೇಶ ಅನಿವಾರ್ಯ ಎಂದು ಕೇಂದ್ರ ವಾದಿಸಿತ್ತು. 
ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಮಧ್ಯಂತರ ತಡೆಯಾಜ್ಞೆಗೊಳಿಸಿ, ಈ ಮೂಲಕ ಸಿಗರೇಟ್ ಪ್ಯಾಕೇಟ್ ಗಳ ಎರಡು ಬದಿಯಲ್ಲಿ ಶೇ.85 ಚಿತ್ರಸಹಿತ ಎಚ್ಚರಿಕೆ ಸಂದೇಶ ಪ್ರಕಟಿಸುವುದಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT