ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

ರೌಡಿ ಶೀಟರ್ ಮನೆಗಳ ಮೇಲೆ ಬೆಂಗಳೂರು ಪೊಲೀಸರ ದಿಢೀರ್ ದಾಳಿ

ನಗರದಲ್ಲಿ ಹೆಚ್ಚುತ್ತಿರುವ ರೌಡಿ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಶನಿವಾರ ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಪೊಲೀಸರು ರೌಡಿ ಶೀಟರ್ ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಶೋಧ..

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ರೌಡಿ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಶನಿವಾರ ಕಾರ್ಯಾಚರಣೆ ಕೈಗೊಂಡ ಬೆಂಗಳೂರು ಪೊಲೀಸರು ರೌಡಿ  ಶೀಟರ್ ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಶೋಧ ನಡೆಸಿದರು.

ದಿನೇ ದಿನೇ ಬೆಂಗಳೂರಿನಲ್ಲಿ ರೌಡಿಗಳ ಹಾವಳಿ ಹೆಚ್ಚುತ್ತಿದ್ದು, ಸುಲಿಗೆ, ದರೋಡೆ ಮತ್ತು ಸರಗಳ್ಳತನದಂತಹ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ  ಪೊಲೀಸರು ಇಂದು ದಿಢೀರ್ ಕಾರ್ಯಾಚರಣೆ ನಡೆಸಿ, ರೌಡಿಗಳ ಮನೆಗಳಲ್ಲಿ ಶೋಧ ನಡೆಸಿದರು. ಶನಿವಾರ ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆದಿದ್ದು, ನಗರದ  ಪೂರ್ವ, ಈಶಾನ್ಯ ಮತ್ತು ಆಗ್ನೇಯ ಭಾಗದ ಸುಮಾರು 300 ಕ್ಕೂ ಹೆಚ್ಚು ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರೌಡಿಗಳು ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರಬಹುದಾದ ಶಂಕೆಯ ಮೇರೆಗೆ ಅವರ ಮನೆಗಳಲ್ಲಿ ತೀವ್ರ ಶೋಧ ನಡೆಸಲಾಗಿದೆ. ಈ ವೇಳೆ ಐಜಿ  ಹರಿಶೇಖರನ್ ಹಾಗೂ ಆಯಾ ವಲಯದ ಡಿಸಿಪಿಗಳ ನೇತೃತ್ವದ ಕಾರ್ಯಾಚರಣೆ ನಡೆಸಲಾಗಿದೆ.

300 ರೌಡಿಗಳ ಬಂಧನ
ಇದೇ ವೇಳೆ ಅಪರಾಧ ಹಿನ್ನಲೆಯುಳ್ಳ ಸುಮಾರು 300 ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪೂರ್ವ ವಿಭಾಗದ ೧೬ ಈಶಾನ್ಯ೧೦ ಮತ್ತು ಆಗ್ನೇಯ ಭಾಗದ ೧೩ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ವಿವಿಧ ಭಾಗಗಳ ರೌಡಿಗಳು, ತಲೆಮರೆಸಿಕೊಂಡಿರುವ ಅಪರಾಧಿಗಳು ವಾರೆಂಟ್ ತಪ್ಪಿಸಿಕೊಂಡು ಪರಾರಿಯಾಗಿರುವವರು ಹಾಗೂ ಅಪರಾಧ ಹಿನ್ನಲೆಯ ಆರೋಪಿಗಳು ಸೇರಿ 300ಕ್ಕೂ ಹೆಚ್ಚು ಮಂದಿಯನ್ನು ಠಾಣೆಗಳಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ಆಯುಕ್ತ ಹರಿಶೇಖರನ್ ತಿಳಿಸಿದರು.

ಮಡಿವಾಳ,ಕಾಡುಗೊಂಡನಹಳ್ಳಿ,ಹೆಚ್‌ಎಎಲ್,ಕೆಆರ್‌ಪುರಂ,ಹಲಸೂರು,ಕೊಡಿಗೇಹಳ್ಳಿ ಇನ್ನಿತರ ಪೊಲೀಸ್ ಠಾಣೆಗಳಿಗೆ ಕರೆತಂದ 300ಕ್ಕೂ ಹೆಚ್ಚು ವ್ಯಕ್ತಿಗಳ ಚಟುವಟಿಕೆಗಳು ಅವರ ಉದ್ಯೋಗ, ಅಪರಾಧ ಪ್ರಕರಣಗಳು,ವಾಸಸ್ಥಳ,ಇನ್ನಿತರ ಮಾಹಿತಿಗಳನ್ನು ಪರಾಮರ್ಶೆ ನಡೆಸಲಾಯಿತು. ಇದೇ ವೇಳೆ ಅಪರಾಧ ಚಟುವಟಿಕೆಗಳಿಂದ ದೂರ ಉಳಿದು ಉತ್ತಮ ಜೀವನ ಸಾಗಿಸುತ್ತಿರುವ ವ್ಯಕ್ತಿಗಳನ್ನು ಹಳೆ ಆರೋಪಿಗಳ ಪಟ್ಟಿಯಿಂದ ತೆಗೆದುಹಾಕಲು ನಿರ್ಧರಿಸಲಾಯಿತು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT