ಡಾ.ಮನು ಬಳಿಗಾರ್ 
ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿ ಮನು ಬಳಿಗಾರ್ ಆಯ್ಕೆ

ದಶಕಗಳ ಇತಿಹಾಸ ವಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷರ ಹುದ್ದೆಗೆ ಭಾನುವಾರ ಚುನಾವಣೆ ನಡೆದಿದ್ದು, ಪರಿಷತ್ತಿನ ಅಧ್ಯಕ್ಷರಾಗಿ ಡಾ.ಮನು ಬಳಿಗಾರ್ ಅವರು ಆಯ್ಕೆಯಾಗಿದ್ದು..

ಬೆಂಗಳೂರು: ದಶಕಗಳ ಇತಿಹಾಸ ವಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷರ ಹುದ್ದೆಗೆ ಭಾನುವಾರ ಚುನಾವಣೆ ನಡೆದಿದ್ದು, ಪರಿಷತ್ತಿನ ಅಧ್ಯಕ್ಷರಾಗಿ ಡಾ.ಮನು ಬಳಿಗಾರ್  ಅವರು ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದು ಬಾಕಿ ಉಳಿದಿದೆ.

ಕನ್ನಡ ಮತ್ತು ಸ೦ಸ್ಕೃತಿ ಇಲಾಖೆಯ ಅಧಿಕಾರಿಯಾಗಿ ಖ್ಯಾತರಾಗಿದ್ದ ಡಾ. ಮನು ಬಳಿಗಾರ್ ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ 25ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು,  ಭಾನುವಾರ ನಡೆದ ಚುನಾವಣೆಯಲ್ಲಿ ರಾಜ್ಯದ ಒಟ್ಟು 292 ಮತಕೇ೦ದ್ರಗಳಲ್ಲಿ 1,08,538 ಮತದಾರರು ಹಕ್ಕು ಚಲಾಯಿಸಿದ್ದರು. ರಾತ್ರಿ ವೇಳೆಗೆ ಎಲ್ಲ 30 ಜಿಲ್ಲೆಗಳ ಫಲಿತಾ೦ಶ ಪ್ರಕಟವಾಗಿದ್ದು, ಈ  ಪೈಕಿ ಮನು ಬಳಿಗಾರ್ ಅವರಿಗೆ 53,070 ಮತಗಳು ಲಭಿಸಿದ್ದು, ಅವರು ಅಗ್ರ ಸ್ಥಾನದಲ್ಲಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ಪ್ರೊ. ಬಿ. ಜಯಪ್ರಕಾಶ್ ಗೌಡರಿಗೆ 19,346 ಮತಗಳು ಲಭೀಸಿವೆ.

ಹೊರರಾಜ್ಯಗಳ, ವಿದೇಶಿ ಸದಸ್ಯರ ಮತ ಎಣಿಕೆಯ ನ೦ತರ ಮ೦ಗಳವಾರ ಅಧಿಕೃತವಾಗಿ ಚುನಾವಣಾಧಿಕಾರಿ ಫಲಿತಾ೦ಶ ಘೋಷಿಸಲಿದ್ದಾರೆ. ಆದರೆ ಈ ಮತಗಳ ಸ೦ಖ್ಯೆ 1,774ರಷ್ಟಿರುವ  ಕಾರಣ ಬಳಿಗಾರ್ ಆಯ್ಕೆಯ ಮೇಲೆ ಯಾವುದೇ ಪರಿಣಾಮ ಬೀರದು ಎನ್ನಲಾಗುತ್ತಿದೆ. ಹೀಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ 25ನೇ ಅಧ್ಯಕ್ಷರಾಗಿ ಮನ ಬಳಿಗಾರ್ ಅವರು ಆಯ್ಕೆಯಾಗುವುದು  ಬಹುತೇಕ ಖಚಿತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT