ಯದುವೀರ್‌ ಮತ್ತು ತ್ರಿಶಿಕಾ ಕುಮಾರಿ 
ರಾಜ್ಯ

ಮೇ 18ಕ್ಕೆ ಯದುವೀರ್ ಒಡೆಯರ್ ವಿವಾಹ; ಮೈಸೂರು ಅರಮನೆಯಲ್ಲಿ ಸಿದ್ಧತೆ

ಮೈಸೂರು ರಾಜ ಮನೆತನದ ಮಹಾರಾಜ ಯದುವೀರ್‌ ವಿವಾಹ ಮೇ 18 ಕ್ಕೆ ಮೈಸೂರು ಅರಮನೆಯಲ್ಲಿ ನಡೆಸಲು ಸಿದ್ಧತೆಗಳು ಆರಂಭವಾಗಿವೆ. ...

ಮೈಸೂರು: ಮೈಸೂರು ರಾಜ ಮನೆತನದ ಮಹಾರಾಜ ಯದುವೀರ್‌ ವಿವಾಹ  ಮೇ 18 ಕ್ಕೆ ಮೈಸೂರು ಅರಮನೆಯಲ್ಲಿ ನಡೆಸಲು ಸಿದ್ಧತೆಗಳು ಆರಂಭವಾಗಿವೆ.

ಶೃಂಗೇರಿ ಶ್ರೀಗಳ ಸೂಚನೆಗಾಗಿ ಕಾಯಲಾಗುತ್ತಿದ್ದು, ಐದು ದಿನಗಳ ಕಾಲ ನಡೆಯುವ ವಿವಾಹ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ವಿವಿಧ ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅರಮನೆ ಮೂಲಗಳು ಖಚಿತಪಡಿಸಿವೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಮೈಸೂರು ಸಂಸ್ಥಾನಕ್ಕೆಯದುವೀರ್‌ರನ್ನು ದತ್ತು ಪಡೆದು ನಂತರ ಮೇ ತಿಂಗಳಿನಲ್ಲಿ ಮೈಸೂರು ಮಹಾಸಂಸ್ಥಾನದ ಮಹಾರಾಜರಾಗಿ ಪಟ್ಟಾಭಿಷೇಕ ನಡೆಸಲಾಯಿತು. ಆಗ ಯದುವೀರ್‌ಗೆ ಶ್ರೀ ಯದುವೀರ ಕೃಷ್ಣಚಾಮರಾಜ ಒಡೆಯರ್ ಎಂದು ನಾಮಕರಣ ಸಹ ಮಾಡಲಾಯಿತು.

ರಾಜಸ್ಥಾನದ ದುಂಗಾಪುರದ ರಾಜವಶಂಸ್ಥೆಯಾದ ತ್ರಿಶಿಕಾ ಕುಮಾರಿ ಜತೆ ನಿಶ್ಚಿತಾರ್ಥ ಸಹ ನಡೆದಿದ್ದು, ತ್ರಿಶಿಕಾ ಕುಮಾರಿ ಮಹಾರಾಜರ ಪಟ್ಟಾಭಿಷೇಕದಲ್ಲಿ ಪಾಲ್ಗೊಳ್ಳುವ ಮೂಲಕ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದರು. ಮೇ ತಿಂಗಳ 8 ಅಥವಾ 18 ರಂದು ಮಹಾರಾಜ ಯದುವೀರ್‌ ಮದುವೆಗೆ ಸಿದ್ಧತೆಗಳು ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಮಹಾರಾಣಿ ಫೆ.15 ರಂದು ಅರಮನೆಯಲ್ಲಿ ರಾಜಪುರೋಹಿತರ ಸಭೆ ನಡೆಸಿದ್ದು ಸಭೆಯಲ್ಲಿ ಯದುವೀರ್‌ ಅದ್ದೂರಿ ಮದುವೆಗೆ ಯಾವ್ಯಾವ ರೀತಿ ಧಾರ್ಮಿಕ ಕಾರ್ಯಗಳನ್ನು ನಡೆಸಬೇಕೆಂಬ ಬಗ್ಗೆ ಸಂಪೂರ್ಣ ಚರ್ಚೆಯಾಗಿದೆ. ಈ ಸಭೆಯಲ್ಲಿ ಯದುವೀರ್‌ ಸಹ ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT