ಡಿ.ಕೆ ಶಿವಕುಮಾರ್ 
ರಾಜ್ಯ

ಪವರ್ ಮಿನಿಸ್ಟರ್ ನಿಂದಿಸಿದ ವ್ಯಕ್ತಿಯ ಬಂಧನ, ಜಾಮೀನಿನ ಮೇಲೆ ಬಿಡುಗಡೆ

ಪವರ್ ಕಟ್ ಸಮಸ್ಯೆಗಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್​ಗೆ ದೂರವಾಣಿ ಕರೆ ಮಾಡಿ ನಿಂದಿಸಿದ ಆರೋಪದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ ರೈ ...

ಸುಳ್ಯ: ಪವರ್ ಕಟ್ ಸಮಸ್ಯೆಗಾಗಿ ಇಂಧನ ಸಚಿವ ಡಿ.ಕೆ. ಶಿವಕುಮಾರ್​ಗೆ  ದೂರವಾಣಿ ಕರೆ ಮಾಡಿ ನಿಂದಿಸಿದ ಆರೋಪದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ ರೈ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯುತ್ ಸಮಸ್ಯೆ ತೀವ್ರಗೊಂಡಿದ್ದು, ಬೆಳ್ಳಾರೆ  ಸುತ್ತಮುತ್ತ ಕೆಲವು ದಿನಗಳಿಂದ ನಿರಂತರ ವಿದ್ಯುತ್ ಕಡಿತ ಉಂಟಾಗುತ್ತಿದೆ. ಇದರಿಂದ ರೋಸಿ ಹೋಗಿದ್ದ ಗಿರಿಧರ ರೈ, ಭಾನುವಾರ ರಾತ್ರಿ ವಿದ್ಯುತ್ ಕಡಿತ ಉಂಟಾದಾಗ ಶಿವಕುಮಾರ್ ಅವರಿಗೆ ವಿದ್ಯುತ್ ಸಮಸ್ಯೆ ಕುರಿತು ತಿಳಿಸಲೆಂದು 7.30ರಲ್ಲಿ ದೂರವಾಣಿ ಕರೆ ಮಾಡಿದ್ದಾರೆ. ಈ ಸಂದರ್ಭ ಆಕ್ರೋಶಗೊಂಡು ಸಚಿವರಿಗೆ ನಿಂದಿಸಿ ಬೆದರಿಕೆ ಹಾಕಿದ್ದರು. .

ಈ ಕುರಿತು ಹಿರಿಯ ಅಧಿಕಾರಿಗಳಿಗೆ ಇಂಧನ ಸಚಿವರು ಮಾಹಿತಿ ನೀಡಿದ್ದಾರೆ. ಅವರ ಸೂಚನೆಯಂತೆ ಸುಳ್ಯದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನೀಡಿದ ದೂರಿನ ಅನ್ವಯ ಸುಳ್ಯ ಪೊಲೀಸರು ಭಾನುವಾರ ರಾತ್ರಿ ಬೆಳ್ಳಾರೆಯ ಅವರ ಮನೆಯಿಂದ ರೈ ಅವರನ್ನು ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಷರತ್ತು ಬದ್ಧ ಜಾಮೀನು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT